ಫೆ.3ರಿಂದ 5ರವರೆಗೆ ದ.ಕ. ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ: ಸಮ್ಮೇಳನಾಧ್ಯಕ್ಷೆ ಡಾ. ಹೇಮಾವತಿ ವೀ. ಹೆಗ್ಗಡೆಯವರಿಗೆ ಆಹ್ವಾನ

ಧರ್ಮಸ್ಥಳ: ಫೆ.3ರಿಂದ 5ರವರೆಗೆ ಉಜಿರೆಯಲ್ಲಿ ನಡೆಯುವ ದ.ಕ. ಜಿಲ್ಲೆಯ 25ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಜ.22ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಸಮ್ಮೇಳನ ಅಧ್ಯಕ್ಷರಾಗಿರುವ ಡಾ. ಹೇಮಾವತಿ ವೀ. ಹೆಗ್ಗಡೆಯವರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್, ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ,‌ ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ ಆರ್.‌ ಶೆಟ್ಟಿ, ಕೇಶವ ಭಟ್ ಅತ್ತಾಜೆ, ಸಮ್ಮೇಳನ ಸಮಿತಿಯ ಕಾರ್ಯದರ್ಶಿ ರಮೇಶ ಮಯ್ಯ,‌ ಹರ್ಷಕುಮಾರ್, ಕಲಾವತಿ, ಅ.ಭಾ.ಸಾ.ಪ. ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ, ರಾಮಕೃಷ್ಣ ಭಟ್ ಬಳಂಜ, ಹರೀಶ್ ರಾವ್ ಮುಂಡ್ರುಪಾಡಿ ಇತರರು ಉಪಸ್ಥಿತರಿದ್ದರು.

error: Content is protected !!