ಉಜಿರೆ ಲಾಡ್ಜ್ ನಲ್ಲಿ ಅಕ್ರಮ ವೇಶ್ಯವಾಟಿಕೆ..!: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ‌ ಕಾರ್ಯಕರ್ತರಿಂದ ಖಚಿತ ಮಾಹಿತಿ: ಲಾಡ್ಜ್ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: 5 ಮಹಿಳೆಯರು, ಇಬ್ಬರು ಪುರುಷರು ಖಾಕಿ ವಶ..!

ಬೆಳ್ತಂಗಡಿ: ಉಜಿರೆಯ ಲಾಡ್ಜ್ ವೊಂದಕ್ಕೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿಯಂತೆ ಬೆಳ್ತಂಗಡಿ ಠಾಣೆಯ ಪಿಎಸ್ ಐ ಅರ್ಜುನ್ ನೇತೃತ್ವದ ಪೊಲೀಸ್ ತಂಡ ದಾಳಿ ಮಾಡಿದ್ದು ಈ‌ ವೇಳೆ ವೇಶ್ಯವಾಟಿಕೆಯಲ್ಲಿ ತೊಡಗಿದ್ದ 5 ಮಂದಿ ಮಹಿಳೆಯರು ಸೇರಿದಂತೆ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ.

ನಿನ್ನೆಯಷ್ಟೆ (ಫೆ.6)ಬಂಟ್ವಾಳ ಡಿವೈಎಸ್ ಪಿ ನೇತೃತ್ವದ ತಂಡದಿಂದ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದ್ದಲ್ಲದೆ,  ಪೊಲೀಸರಿಗೆ ಈ ಬಗ್ಗೆ ಯಾವುದೇ ಮಾಹಿತಿ‌ ಲಭ್ಯವಾಗಿಲ್ಲ. ಇವತ್ತು  ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಲಾಡ್ಜ್ ಮಾಲಕರ ಸಭೆ ನಡೆಸಿ ಯಾವುದೇ ಕಾರಣಕ್ಕೂ ಅನೈತಿಕ ವ್ಯವಹಾರ ಮಾಡದಂತೆ ಎಚ್ಚರಿಕೆಯನ್ನು ನೀಡಿದ್ದರು. ಆದರೆ ಈ ಬೆನ್ನಲ್ಲೇ ಉಜಿರೆಯ ಎಂ ಎಸ್ ಎಸ್ ಲಾಡ್ಜಿನಲ್ಲಿ ಅಕ್ರಮ ವೇಶ್ಯವಾಟಿಕೆ ನಡೆಯುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ‌ ಪಡೆದ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ‌ಪೊಲೀಸರು‌ ಲಾಡ್ಜ್ ಗೆ ದಾಳಿ ನಡೆಸಿ 5ಮಹಿಳೆಯರ ಸಹಿತ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ.

 

error: Content is protected !!