ಪ್ರಧಾನಿಯವರ `ಏಕ್ ಭಾರತ್ ಶ್ರೇಷ್ಠ ಭಾರತ್’ ಕಾರ್ಯಕ್ರಮ ಮಹತ್ವಪೂರ್ಣವಾಗಿದೆ:ಭಾಷೆಗಳು ನಮ್ಮನ್ನು ವಿಭಜಿಸುವುದಿಲ್ಲ, ಬದಲಾಗಿ ಒಗ್ಗೂಡಿಸುತ್ತವೆ:ಸಂಸತ್ತಿನಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ವಂದನಾರ್ಪಣೆ: ಪ್ರಧಾನಿ ಕಾರ್ಯವೈಖರ್ಯಕ್ಕೆ ಮೆಚ್ಚುಗೆ

ಉಜಿರೆ: ಕಾಶಿ ಶ್ರೀ ವಿಶ್ವನಾಥ ದೇವಾಲಯದ ಅಭಿವೃದ್ಧಿಯನ್ನು ಕಣ್ಣಾರೆ ನೋಡಿ ಆಶ್ಚರ್ಯಚಕಿತನಾಗಿದ್ದೇನೆ. ಈ ಮೊದಲು ಅಲ್ಲಿಗೆ 2 ಬಾರಿ ನಾನು ಭೇಟಿ ನೀಡಿದ್ದೇನೆ. ಅಂದಿಗೂ ಇಂದಿಗೂ ಇರುವ ವ್ಯತ್ಯಾಸ ಮತ್ತು ಅಲ್ಲಿನ ಅಭಿವೃದ್ಧಿಯನ್ನು ಕಂಡು ತುಂಬಾ ಸಂತೋಷಪಟ್ಟಿದ್ದೇನೆ. ಅದಕ್ಕಾಗಿ ಮಾನ್ಯ ಮೋದೀಜಿಯವರನ್ನು ಅಭಿನಂದಿಸುತ್ತೇನೆ ಎಂದು ಡಾ.ಡಿ ವಿರೇಂದ್ರ ಹೆಗ್ಗಡೆಯವರು ಹೇಳಿದ್ದಾರೆ.

ಅವರು ಸಂಸತ್ತಿನಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನೆ ಸಲ್ಲಿಸುವ ಅವಕಾಶ ಪಡೆದು ಪ್ರಧಾನ ಮಂತ್ರಿಗಳು ಮಾತನಾಡುವ ಮೊದಲು 10 ನಿಮಿಷದ ಅವಕಾಶವನ್ನು ಹೆಗ್ಗಡೆಯವರಿಗೆ ನೀಡಿದಾಗ, ದೇಶದ ಭವಿಷ್ಯ ಗತವೈಭವದಲ್ಲಿಲ್ಲ, ಪ್ರಸ್ತುತ ವಿದ್ಯಮಾನಗಳು ಮುಂದಿನ ಉಜ್ವಲ ಪ್ರಗತಿಗೆ ಬುನಾದಿಯಾಗಿದೆ. ನಮ್ಮ ಆಧ್ಯಾತ್ಮಿಕತೆ ಮತ್ತು ಪ್ರಸಿದ್ಧ ತೀರ್ಥಕ್ಷೇತ್ರಗಳ ಬಗ್ಗೆ ಯುವಜನತೆಗೆ ಅರಿವು, ಜಾಗೃತಿ ಮೂಡಿಸಬೇಕು. ಅವರಿಗೆ ಸೂಕ್ತ ಅವಕಾಶಗಳ ನಿರ್ಮಾಣ ಮಾಡಬೇಕು. ಕಾಶಿ, ಅಯೋಧ್ಯೆ, ಕೇದಾರನಾಥ ಮೊದಲಾದ ಪವಿತ್ರ ಕ್ಷೇತ್ರಗಳು ಅದ್ಭುತ ಸುಧಾರಣೆ ಕಂಡಿದೆ. ಇನ್ನು ಮುಂದಿನ ದಿನಗಳಲ್ಲಿ ರಾಷ್ಟ್ರದ ಪವಿತ್ರ ಕ್ಷೇತ್ರಗಳು ಉತ್ತಮ ರೀತಿಯಲ್ಲಿ ಅಭಿವೃದ್ಧಿಗೊಳ್ಳಲಿ. ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಿಂದ ಶುಭಾಶಯವನ್ನು ಕೋರುತ್ತೇನೆ. ಎಂದರು.

ನಮ್ಮ ಭವ್ಯಪರಂಪರೆಯ ಬಗ್ಗೆ ವಿದೇಶಿಯರಿಗೂ ಅಪಾರ ಅಭಿಮಾನ ಮತ್ತು ಗೌರವವಿದೆ. ಇಲ್ಲಿಂದ ವಿದೇಶಗಳಿಗೆ ಹೋದ ಆಧ್ಯಾತ್ಮಿಕ ಗುರುಗಳು, ನೇತಾರರು ಆರೋಗ್ಯ ಭಾಗ್ಯ ರಕ್ಷಣೆಯಲ್ಲಿ ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದ್ಧತಿಯ ಮಹತ್ವವನ್ನು ಪ್ರಚಾರ ಮಾಡಿದ್ದಾರೆ. ಆರೋಗ್ಯ ರಕ್ಷಣೆಯಲ್ಲಿ ಸಿರಿಧಾನ್ಯಗಳ ಪಾತ್ರನೂ ಮಹತ್ವಪೂರ್ಣವಾಗಿದೆ. ಪ್ರಧಾನಿಯವರ `ಏಕ್ ಭಾರತ್ ಶ್ರೇಷ್ಠ ಭಾರತ್’ ಕಾರ್ಯಕ್ರಮ ವಿಶೇಷವಾಗಿ ಮಹತ್ವಪೂರ್ಣವಾಗಿದೆ . ಭಾಷೆಗಳು ನಮ್ಮನ್ನು ವಿಭಜಿಸುವುದಿಲ್ಲ, ಬದಲಾಗಿ ಒಗ್ಗೂಡಿಸುತ್ತವೆ ಎಂದಿದ್ದಾರೆ.
ರಾಷ್ಟ್ರಪತಿಗಳು `ಕಾಯಕವೇ ಕೈಲಾಸ’ ಎಂಬ ಕರ್ನಾಟಕದ ಶ್ರೀ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಬಗ್ಗೆ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.

error: Content is protected !!