ವಿಧಾನ ಸಭಾ ಚುನಾವಣೆ 2023 :ಬೆಳ್ತಂಗಡಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ:

 

ಬೆಳ್ತಂಗಡಿ: ಮೇ 10 ರಂದು ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ  ಬೆಳ್ತಂಗಡಿಯ ಬಿಜೆಪಿ ಮಂಡಲ ಇದರ  ಚುನಾವಣಾ ಕಚೇರಿಯನ್ನು  ಹಳೇಕೋಟೆ ಬಳಿ ಬಿಜೆಪಿಯ ಹಿರಿಯ ಕಾರ್ಯಕರ್ತ ನ್ಯಾಯವಾದಿಗಳಾದ ನೇಮಿರಾಜ್ ಶೆಟ್ಟಿ ಪಡಂಗಡಿ  ಉದ್ಘಾಟಿಸಿ ಶುಭ ಹಾರೈಸಿದರು.‌

 

 

ಕಾರ್ಯಕ್ರಮದಲ್ಲಿ  ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ವಿಧಾನಸಭಾ ಚುನಾವಣಾ ಪ್ರಭಾರಿ ಆಶಾ ತಿಮ್ಮಪ್ಪ ಗೌಡ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ  ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ , ಗಣೇಶ್ ಗೌಡ ನಾವೂರು.
ಮಂಡಲ ಉಪಾಧ್ಯಕ್ಷ
ಸೀತಾರಾಮ ಬೆಳಾಲು, ಕೃಷ್ಣ ಆಚಾರ್ಯ, ಮಂಡಲ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಬಾಲಕೃಷ್ಣ ಶೆಟ್ಟಿ ಸವಣಾಲು, ಹಿರಿಯ ವಕೀಲರಾದ ಸುಬ್ರಹ್ಮಣ್ಯ ಅಗರ್ತ, ಕೆ ಎಂ ಎಫ್ ನಿರ್ದೇಶಕ ಪದ್ಮನಾಭ ಅರ್ಕಜೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೊರಗಪ್ಪ ಗೌಡ, ಸುಧೀರ್ ಸುವರ್ಣ, ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿ ಸಿ.ಎ.ಬ್ಯಾಂಕ್ ಅಧ್ಯಕ್ಷ ಅಜಿತ್ ಅರಿಗ, ಪ್ರಮುಖರಾದ ನಾರಾಯಣ ಭಟ್ ಮುಗುಳಿ, ಶ್ರೀನಿವಾಸ ಕಿಣಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.ಪ್ರಧಾನ ಕಾರ್ಯದರ್ಶಿ  ಶ್ರೀನಿವಾಸ್ ರಾವ್ ಧರ್ಮಸ್ಥಳ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

 

 

error: Content is protected !!