ಬೆಳ್ತಂಗಡಿ ಹಲವೆಡೆ ಗಾಳಿ ಮಳೆ , ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ:

 

 

 

ಬೆಳ್ತಂಗಡಿ: ,ತಾಲೂಕಿನ ಹಲವೆಡೆ ‌ ಶುಕ್ರವಾರ ಸಂಜೆ ಮಳೆಯಾಗಿದ್ದು ಉಜಿರೆ ನಡ ಗ್ರಾಮಗಳಲ್ಲಿ ಗಾಳಿ ಸಹಿತ ಅಲಿಕಲ್ಲು ಮಳೆಯಾಗಿದೆ.‌ಹಲವೆಡೆ ಗಾಳಿ ಮಳೆಗೆ ಮನೆ ಹಾಗೂ ಕೃಷಿಗೆ ಹಾನಿ ಸಂಭವಿಸಿದೆ ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ನಡ ಪಂಚಾಯತ್ ಅಧ್ಯಕ್ಷ ವಿಜಯ್ ಗೌಡ, ಉಜಿರೆ ಪಂಚಾಯತ್ ಅಧ್ಯಕ್ಷೆ ಪುಷ್ಪಾ ಆರ್. ಶೆಟ್ಟಿ, ಮಾಜಿ ತಾಲೂಕು ಸ್ಥಾಯಿ ಸಮಿತಿ ಸದಸ್ಯ ಶಶಿಧರ್ ಕಲ್ಮಂಜ, ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷ ಚೆನ್ನಕೇಶವ ಉಪಸ್ಥಿತರಿದ್ದರು.

error: Content is protected !!