ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ..!: ಬಿಜೆಪಿ ರಾಷ್ಟಾಧ್ಯಕ್ಷ ಜೆ.ಪಿ ನಡ್ಡಾರಿಗೆ ಕಾರಣ ತಿಳಿಸಿ ಪತ್ರ

ಬೆಂಗಳೂರು: ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಬಿಜೆಪಿ ರಾಷ್ಟಾಧ್ಯಕ್ಷ ಜಗತ್‌ಪ್ರಕಾಶ್ ನಡ್ಡಾಜಿ ಅವರಿಗೆ ಪತ್ರ ಬರೆದು ನಿವೃತ್ತಿಯ ಕಾರಣವನ್ನು ತಿಳಿಸಿದ್ದಾರೆ.

ಪತ್ರದಲ್ಲಿ, ‘ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

error: Content is protected !!