ಬಿಜೆಪಿ ಚುನಾವಣಾ ಪೂರ್ವ ಸಭೆ: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ: ಬಿಜೆಪಿ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿ ತತ್ವ ಸಿದ್ಧಾಂತ ಹಾಗೂ ಬೆಳ್ತಂಗಡಿಯ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ಬಡಕೋಡಿ ಗ್ರಾಮದ ರವಿ ನಾಯ್ಕ್, ಮೂಡುಕೋಡಿ ಗ್ರಾಮದ ಜಯರಾಮ್, ಸುಧಾಕರ್ ಏ.12ರಂದು ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಕ್ಷರು ಹರಿಕೃಷ್ಣ ಬಂಟ್ವಳ, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

error: Content is protected !!