ಸುರತ್ಕಲ್ : ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಸ್ಥಳದಲ್ಲೇ ಸಾವು:

 

 

ಬೆಳ್ತಂಗಡಿ:   ಕಾರು ಡಿಕ್ಕಿಯಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ   ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಮುಕ್ಕ ಎಂಬಲ್ಲಿ ಎ 14 ರಂದು ಸಂಜೆ   ನಡೆದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಯಕ್ಷಗಾನ ಸುರತ್ಕಲ್ ಸಮೀಪದ ಮುಕ್ಕದಲ್ಲಿ  ಆಯೋಜನೆ ಮಾಡಲಾಗಿತ್ತು.ಇಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಬೆಳಾಲಿನ ಜೀವನ್ ಕುಮಾರ್  (36) ಎಂಬವರು ಸಂಜೆ 4.30 ರ ಸುಮಾರಿಗೆ ನಡೆದುಕೊಂಡು ಹೋಗುತ್ತಿರುವ ವೇಳೆ ವೇಗವಾಗಿ ಬರುತಿದ್ದ ಕಾರೊಂದು ಅವರಿಗೆ  ಡಿಕ್ಕಿ ಹೊಡೆದಿದೆ.‌ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ  ಜೀವನ್ ಕುಮಾರ್   ಗಂಭೀರ ಗಾಯಗೊಂಡು ಸ್ಥಳದಲ್ಲೇ    ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.  ಅವರು ಧರ್ಮಸ್ಥಳ ಮೇಳದಲ್ಲಿ ಸುಮಾರು 15 ವರ್ಷಗಳಿಗಿಂತಲೂ ಹೆಚ್ಚು ಸಮಯಗಳಿಂದ ಕೆಲಸ ನಿರ್ವಹಿಸುತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!