ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ: ಅಪಾರ ಸಂಖ್ಯೆಯ ಕಾರ್ಯಕರ್ತರ ಬೃಹತ್ ಮೆರವಣಿಗೆ:

 

 

 

 

ಬೆಳ್ತಂಗಡಿ : ವಿಧಾನ ಸಭಾ ಚುನಾವಣೆ ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಿದರು.ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದ ನಂತರ ಅಪಾರ ಸಂಖ್ಯೆಯ ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ಮೂಲಕ ಆಗಮಿಸಿದ ಅವರು ತಾಲೂಕು ಆಡಳಿತ ಕಛೇರಿಯಲ್ಲಿ ತಮ್ಮ ಉಮೇದುದಾರಿಕೆ ಸಲ್ಲಿಸಿದರು.ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ರಂಜನ್. ಜಿ. ಗೌಡ,  ಹಾಗೂ ಶೈಲೇಶ್ ಕುಮಾರ್ ಕುರ್ತೋಡಿ, ಸಾಹುಲ್ ಹಮೀದ್, ವಕೀಲ ಸಂತೋಷ್ ಉಪಸ್ಥಿತರಿದ್ದರು.

error: Content is protected !!