ಬೆಳ್ತಂಗಡಿಯ ಪತ್ರಕರ್ತ ಈಗ ಜೆಡಿಎಸ್ ಅಭ್ಯರ್ಥಿ: ರಾಜ್ಯದ ಪ್ರಮುಖ ರಾಜಕೀಯ ಪಕ್ಷದಿಂದ ಸ್ಪರ್ಧೆ: ಹರೀಶ್ ಪೂಂಜ, ರಕ್ಷಿತ್ ಶಿವರಾಂ ಎದುರಿಸಲಿರುವ ಅಭ್ಯರ್ಥಿ: ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ; ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಜನತಾದಳ ಪಕ್ಷದಲ್ಲಿ ಸ್ಪರ್ಧಿಸಲು ಅಶ್ರಫ್ ಆಲಿಕುಂಞಿ ಮುಂಡಾಜೆಯವರಿಗೆ ಅವಕಾಶ ಲಭಿಸಿದೆ.

ಮಾಜಿ ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರು ಏ.20 ರಂದು ಪಕ್ಷದ ಹಿರಿಯರ ಸಮ್ಮುಖ ಅವರಿಗೆ ಅಧಿಕೃತ ‘ಬಿ ಫಾರ್ಮ್’ ಹಸ್ತಾಂತರಿಸಿದ್ದರು. ಈ ಹಿನ್ನೆಲೆ ಏ.20ರಂದು ಮಧ್ಯಾಹ್ನ ಅಶ್ರಫ್ಆಲಿಕುಂಞಿ ನಾಮಪತ್ರ ಸಲ್ಲಿಸಿದ್ದಾರೆ

ಕಳೆದ 23 ವರ್ಷಗಳಿಂದ ಗ್ರಾಮೀಣ ಪತ್ರಕರ್ತರಾಗಿ ಜನಸಂಪರ್ಕದಲ್ಲಿರುವ ಇವರು ಅಭಿವೃದ್ಧಿಪರ ಮತ್ತು ಮಾನವೀಯ ಪತ್ರಿಕೋಧ್ಯಮದ ಮೂಲಕ ಅಪಾರ ಜನಮನ್ನಣೆ ಗಳಿಸಿಕೊಂಡಿದ್ದು ತಾಲೂಕಿನ ನೈಜ ಸಮಸ್ಯೆಗಳ ಬಗ್ಗೆ ಸ್ಪಷ್ಟವಾಗಿ ಅರಿತುಕೊಂಡಿದ್ದಾರೆ.

error: Content is protected !!