ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ: ಈ ಬಾರಿಯೂ ಬಾಲಕಿಯರೇ ಮೇಲುಗೈ..!

ಬೆಂಗಳೂರು: ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಹಾಗೂ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆ  ಅತೀ ಹೆಚ್ಚು ಫಲಿತಾಂಶ ಪಡೆದ ಜಿಲ್ಲೆಯಾಗಿ ಹೊರ ಹೊಮ್ಮಿದ್ದು, ಉಡುಪಿ ದ್ವಿತೀಯ ಸ್ಥಾನ,  ಕೊಡಗು 3ನೇ ಸ್ಥಾನ, ಉತ್ತರ ಕನ್ನಡ ಜಿಲ್ಲೆ 4ನೇ ಸ್ಥಾನ ಪಡೆದಿದೆ. ಇನ್ನು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.

ಬೆಂಗಳೂರಿನ ಜಯನಗರ ಎನ್ಎಂಕೆಆರ್ ವಿ ಕಾಲೇಜು ವಿದ್ಯಾರ್ಥಿನಿ ತಬಸುಂ ಶೇಖ್ ಕಲಾ ವಿಭಾಗದದಲ್ಲಿ 600 ಕ್ಕೆ 593 ಅಂಕ ಪಡೆದ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆಳ್ವಾಸ ಪಿಯು ಕಾಲೇಜು ಮೂಡಬಿದರೆ ವಿದ್ಯಾರ್ಥಿನಿ ಅನಾನ್ಯ ಕೆ.ಎ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಕೋಲಾರದ ಗಂಗೋತ್ರಿ ಕಾಲೇಜು ವಿದ್ಯಾರ್ಥಿಗಳಾದ ಕೌಶಿಕ್, ಸುರಭಿ ಎಸ್ ವಿಜ್ಞಾನ ವಿಭಾಗದಲ್ಲಿ 600 ಕ್ಕೆ 596 ಅಂಕ ಪಡೆದ ಮೊದಲ ಸ್ಥಾನ ಗಳಿಸಿದ್ದಾರೆ.

ಬಾಲಕಿಯರ ಒಟ್ಟಾರೆ ಫಲಿತಾಂಶ ಶೇ.80.25 ಇದ್ದರೆ, ಬಾಲಕರ ಒಟ್ಟಾರೆ ಫಲಿತಾಂಶ ಶೇ.69.05 ರಷ್ಟು ಇದೆ. ಇನ್ನು ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳು ಶೇ.82.30 ರಷ್ಟು ಫಲಿತಾಂಶ ಪಡೆದರೆ, ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಶೇ.65.05 ರಷ್ಟು ಫಲಿತಾಂಶ ಪಡೆದಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶವನ್ನು 11 ಗಂಟೆಯಿಂದ https://karresults.nic.in ವೆಬ್‌ಸೈಟ್‌ನಲ್ಲಿ ರಿಸಲ್ಟ್ ವೀಕ್ಷಿಸಬಹುದು

error: Content is protected !!