ಹರೀಶ್ ಪೂಂಜ ಅಭಿವೃದ್ಧಿ ಕಾರ್ಯಗಳಿಗೆ ಜನ ಮೆಚ್ಚುಗೆ: ತಾಲೂಕಿನ ನೂರಾರು ಕಾಂಗ್ರೆಸಿಗರು ಬಿಜೆಪಿ ಸೇರ್ಪಡೆ:

 

 

ಬೆಳ್ತಂಗಡಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಏರುತ್ತಿದೆ. ಬೆಳ್ತಂಗಡಿ ಕ್ಷೇತ್ರಕ್ಕೆ ಹಾಲಿ ಶಾಸಕ ಹರೀಶ್‌ ಪೂಂಜ ಅವರಿಗೆ ಎರಡನೇ ಬಾರಿಗೆ ಪಕ್ಷ ಅವಕಾಶ ಕಲ್ಪಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರಲ್ಲಿ‌ ಉತ್ಸಾಹ ಮೂಡಿದೆ.

ಶಾಸಕ ಹರೀಶ್‌ ಪೂಂಜ ಅವರು ಕಳೆದ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ತಾಲೂಕಿನ ಹಳ್ಳಿಗಳ ಅಭಿವೃದ್ಧಿ,ಹಾಗೂ ಸಮರ್ಥ ನಾಯಕತ್ವ ಮತ್ತು ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ್‌ ಕೋಟ್ಯಾನ್‌ ಅವರ ಪಕ್ಷ ಸಂಘಟನೆಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ದಿನದಿಂದ ದಿನಕ್ಕೆ ಬಲಿಷ್ಠಗೊಳ್ಳುತ್ತಿದೆ.

 

 

ಬಿಜೆಪಿ ಪಕ್ಷದ ಸಿದ್ಧಾಂತ, ಅಭಿವೃದ್ಧಿ ಆಧಾರಿತ ರಾಜಕಾರಣ ಮತ್ತು ಮೋದಿ ಅವರ ಸುಭದ್ರ ಆಡಳಿತ, ಬೆಳ್ತಂಗಡಿ ಕ್ಷೇತ್ರದಲ್ಲಾದ ಅಭಿವೃದ್ಧಿಗೆ ಮನಸೋತು ಹಾಗೂ ಕಾಂಗ್ರೆಸ್‌ ಪಕ್ಷದ ದೇಶ ವಿರೋಧಿ ನಿಲುವು, ಧರ್ಮವಿರೋಧಿ ಚಿಂತನೆಗಳಿಂದ ಬೇಸರಗೊಂಡಿರುವ ಕಾಂಗ್ರೆಸ್‌ ನಾಯಕರು ಬಿಜೆಪಿ ಪಕ್ಷದತ್ತ ಮುಖ ಮಾಡುತ್ತಿದ್ದಾರೆ.

ಹರೀಶ್‌ ಪೂಂಜ ಅವರು ಎರಡನೇ ಬಾರಿಗೆ ಅಭ್ಯರ್ಥಿಯಾಗಿ ಘೋಷಣೆಗೊಂಡ ಬಳಿಕ ಇದುವರೆಗೂ ನೂರಾರು ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಅಭ್ಯರ್ಥಿ ಹರೀಶ್‌ ಪೂಂಜ ಅವರ ನಾಮಪತ್ರ ಸಲ್ಲಿಕೆಯ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮುಖಂಡರಾದ ಬೋಲೊಟ್ಟು ವಿಠಲ ಶೆಟ್ಟಿ, ರತ್ನಾಕರ ಪೂಜಾರಿ, ಸತೀಶ್ ಶೆಟ್ಟಿ, ಪವನ್ ಶೆಟ್ಟಿ , ಹಂಝ ಮಿತ್ತಬಾಗಿಲು, ವಸಂತ ಬಂಗೇರರ ಬೆಂಬಲಿಗ ಸೇಸಪ್ಪ ನಲಿಕೆ ಅಳದಂಗಡಿ, ರೋಶನ್‌ ಮೇಲಂತಬೆಟ್ಟು ಅವರು ತಮ್ಮ ಬೆಂಬಲಿಗರೊಂದಿಗೆ ಪಕ್ಷಕ್ಕೆ ಸೇರ್ಪಡೆಗೊಂಡರು.

ಪಕ್ಷ ಅಭ್ಯರ್ಥಿ ಘೋಷಿಸಿದ ಬಳಿಕ ಶಾಸಕ ಹರೀಶ್‌ ಪೂಂಜ ಅವರು ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿದ್ದು ಈ ವೇಳೆ ಅನೇಕ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಬಿಜೆಪಿಗೆ ಸೇರ್ಡೆಗೊಂಡಿದ್ದಾರೆ.

ಕಳೆಂಜ ಗ್ರಾಮದ ಬಾಲಕೃಷ್ಣ ಉದ್ರಾಜೆ, ಎಜೆ ಜೋಸೆಫ್ ಕಾಯಡ, ಸಿಬಿನ್ ಎಕೊ, ಜೋಜಿ, ಪುದುವೆಟ್ಟು ಗ್ರಾಮದ ಎ.ಟಿ. ರಾಜು, ಗಂಡಿಬಾಗಿಲು ಗ್ರಾಮದ ಅಜಿತ್ ಪಿ.ಎಮ್, ಬಜಿರೆಯ ಪ್ರಸಾದ್ ಬಜಿರೆ, ಹರಿ ಮುದ್ದಾಡಿ, ಮೂಡುಕೋಡಿ ಗ್ರಾಮದ ಹೆನ್ರಿ ಡಿಸೋಜ ಕಾಳಗುರಿ, ಶ್ರೀಧರ ಪೂಜಾರಿ ಕುಕ್ಕರಲ್ಕೆ, ಅಕ್ಷಯ್ ಪೂಜಾರಿ, ಲಲಿತಾ, ಸವಿತಾ, ವಾರಿಜ, ಸುನೀಲ್, ಸುನಿತಾ, ಕುಸುಮ ಕುದ್ರಲ್ಕೆ, ಅಣ್ಣುಶೆಟ್ಟಿ ಬೆದ್ರಡ್ಧ, ಕೀರ್ತನ್ ಪುತ್ತಿಲಕಜೆ, ಇನಾಸ್ ಡಿಸೋಜ ಕುದ್ರಪಲ್ಕೆ, ರಾಜು ನಾಯ್ಕ ಕೊಪ್ಪದ ಬಾಕಿಮಾರು ಮತ್ತು ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾದ ಕೇಶವ ಪಿಲ್ಯ, ದ.ಕ. ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಎನ್. ಸಿ. ಸಂಜೀವ ನೆರಿಯ, ನಿಡ್ಲೆ ಗ್ರಾಮದ ಯೋಗೀಶ್ ಗೌಡ ನೂಜಿಲ, ಕಲ್ಮಂಜ ಗ್ರಾಮದ ಜೋಷ್ ಅಕ್ಷಯನಗರ, ನಾಲ್ಕೂರು ಗ್ರಾಮದ ವಿಠಲ್ ಪೂಜಾರಿ, ದಿನೇಶ್ ಪೂಜಾರಿ ಕುದ್ರೊಟ್ಟು, ದುಗ್ಗಯ್ಯ ಪೂಜಾರಿ ಹುಂಬೆಜೆ, ನೋಣಯ್ಯ ಪೂಜಾರಿ ಖಂಡಿಗ, ಜಗದೀಶ್ ಪೂಜಾರಿ ಕುದ್ರೊಟ್ಟು, ಹರೀಶ್ ಪೂಜಾರಿ ಕುದ್ರೊಟ್ಟು, ಕೊರಗಪ್ಪ ಪೂಜಾರಿ ಹುಂಬೆಜಲ್ಕೆ, ಯಶೋಧ ಖಂಡಿಗ, ಮಾಧವ ಪೂಜಾರಿ ಖಂಡಿಗ, ಸುಕೇಶ್ ಪೂಜಾರಿ ಹುಂಬೆಲಕ್ಕೆ, ಅನಿಸಿತ್ ಪೂಜಾರಿ ಹುಂಬೆಜೆ, ನಿಶಾಂತ್ ಪೂಜಾರಿ ಹುಂಬೆಜೆ, ಶ್ರೀಕಾಂತ್ ಪೂಜಾರಿ ಖಂಡಿಗ, ಶಿಬಾಜೆ ಗ್ರಾಮದ ಅನಿರುದ್‌ ಬಿಜು ಅರಂಪಾದೆ, ಬೆಳಾಲು ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷ ಕೇಶವ ಗೌಡ, ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ಸಂತೋಷ್ ಮಡಿವಾಳ, ಪ್ರಭಾಕರ ಗೌಡ, ದಿನೇಶ್, ಪ್ರವೀಣ್,ಉಪೇಂದ್ರ, ಬೈಪಾಡಿಯ ದಿವಾಕರ ಗೌಡ ಚೆನ್ನಕೇಶವ ನೇಮಣ್ಣ ಗೌಡ ಸೇರಿದಂತೆ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತೊರೆದಿದ್ದಾರೆ.

error: Content is protected !!