ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ: ಮಾಜಿ ಶಾಸಕ ವಸಂತ ಬಂಗೇರ :

 

 

ಬೆಳ್ತಂಗಡಿ:- ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರಿಗೆ ನೀಡುತ್ತಿರುವ ಗ್ಯಾರೆಂಟಿಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ. ಸ್ಥಳೀಯ ಶಾಸಕರ ಅಧಿಕಾರ ದುರ್ಬಳಕೆ ಮಿತಿ ಮೀರಿ ಜನರೇ ಸೋಲಿಸಲು ತೀರ್ಮಾನಿಸಿದ್ದಾರೆ. ಯುವ ನಾಯಕ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ವಸಂತ್ ಬಂಗೇರ ವಿಸ್ವಾಸ ವ್ಯಕ್ತಪಡಿಸಿದ್ದಾರೆ.

ಪಡಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ನನ್ನ ಸುಧೀರ್ಘ ಅವಧಿಯಲ್ಲಿ ಈ ಮಟ್ಟದ ಭ್ರಷ್ಟಾಚಾರ ಎಂದೂ ನೋಡಿಲ್ಲ. ತಾಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.

ಇದೇ ವೇಳೆ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಬೇಕಾದರೆ ರಕ್ಷಿತ್ ಶಿವರಾಂ ಗೆಲ್ಲಬೇಕು. ಕರಾವಳಿ ಜಿಲ್ಲೆಗಳಲ್ಲಿ ಬದಲಾವಣೆಯ ಪರ್ವ ಶುರುವಾಗಿದೆ. ಅದು ಬೆಳ್ತಂಗಡಿ ತಾಲೂಕಿನಿಂದಲೇ ಶುರುವಾಗಲಿದೆ. ನಮ್ಮ ಕಾರ್ಯಕರ್ತರು ಪ್ರತಿ ಮನೆ ಮನೆಗೂ ತೆರಳಿ ಮತ ಹಾಕಿಸಬೇಕು ಎಂದು ಮನವಿ ಮಾಡಿದರು.

ಮತಯಾಚನೆ ವೇಳೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶೇಖರ್ ಕುಕ್ಕೇಡಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯೆ ಸುಶೀಲಾ,
ಕುಕ್ಕೇಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪದ್ಮನಾಭ್ , ಪಡಂಗಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮ್ಯಾಕ್ಸಿನ್ ಕ್ರಾಸ್ತ, ಬಳೆಂಜ ಪಂಚಾಯಿತಿ ಸದಸ್ಯ ರವೀಂದ್ರ ಬಿ ಅಮೀನ್, ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

error: Content is protected !!