ಅಜೆಕಲ್ಲು ನಿವಾಸಿ ಚಂದ್ರಕಾಂತಗೆ ಕೊಲೆ ಬೆದರಿಕೆ..!: ಅವಾಚ್ಯ ಶಬ್ಧಗಳಿಂದ ನಿಂದಿಸಿದ ಅಭಿಷೇಕ್ ಎಂ. ವಿರುದ್ಧ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು..

ಬೆಳ್ತಂಗಡಿ: ಮೆಸ್ಕಂ ಉದ್ಯೋಗದಲ್ಲಿರುವ ಹುಣ್ಣೆಕಟ್ಟೆ ನಿವಾಸಿ ಅಭಿಷೇಕ್ ಎಂ. ಎಂಬಾತ ಲಾಯಿಲ ಗ್ರಾಮದ ಅಜೆಕಲ್ಲು ನಿವಾಸಿ ಚಂದ್ರಕಾಂತ ಎಂಬವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿರುವ ಬಗ್ಗೆ ಬೆಳಂಗಡಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

ಮೇ 30ರಂದು ಬೆಳಗ್ಗೆ 9 ಗಂಟೆಗೆ ಪಿಕ್‌ಆಪ್ ವಾಹನದಲ್ಲಿ ಕಸಬಾ ಗ್ರಾಮದ ಚರ್ಚ್ ರಸ್ತೆಯಿಂದ ಕೆಇಬಿ ರಸ್ತೆ ಕಡೆಗೆ ಚಂದ್ರಕಾಂತ ಹೋಗುತ್ತಿದ್ದಾಗ, ಪರಿಚಯಸ್ಥನಾದ ಅಭಿಷೇಕ್ ಎಂ. ಎಂಬಾತ ಇದ್ದಕ್ಕಿದ್ದಂತೆ ಬೈಕ್‌ನಲ್ಲಿ ಬಂದು ಪಿಕ್‌ಆಪ್‌ಗೆ ಅಡ್ಡಲಾಗಿ ನಿಂತು, ಚಂದ್ರಕಾಂತ ಅವರನ್ನು ತಡೆದು ‘ನೀನು ಬಾರೀ ಹಾರಾಡುತ್ತೀಯ, ಹರೀಶ್ ಪೂಂಜನ ಚೇಲಾ ಶಶಿರಾಜ್ ಶೆಟ್ಟಿ ಜೊತೆ ಬಾರೀ ತಿರುಗಾಡುತ್ತೀಯ, ನಿನ್ನ ಶಶಿರಾಜ್‌ಗೆ ಏನು ಮಾಡಬೇಕೆಂದು ನನಗೆ ಗೊತ್ತು, ಅವರನ್ನು ಎಲ್ಲಿ ಮಟ್ಟ ಹಾಕಬೇಕು ಅಲ್ಲಿ ಮಟ್ಟ ಹಾಕುತ್ತೇನೆ’ ಎಂದು ಹೇಳಿ ಎಳೆದಾಡಿದ್ದು, ‘ಯಾಕೆ, ಏನಾಗಿದೆ? ನನ್ನನ್ನು ಏನು ಮಾಡುತ್ತಿದ್ದಿಯಾ ಎಂದು ಚಂದ್ರಕಾಂತ ಪ್ರಶ್ನಿಸಿದಾಗ, ಅಭಿಷೇಕ್, ಚಂದ್ರಕಾಂತ ಅವರ ಜಾತಿ ನಿಂದನೆ ಮಾಡಿ, ಮೆಸ್ಕಾಂನಲ್ಲಿ ಒಳ್ಳೆಯ ಕೆಲಸದಲ್ಲಿರುವ ನನ್ನ ಎದುರು ನಿಲ್ಲಲು ನಿನಗೆ ಯೋಗ್ಯತೆ ಇದೆಯೇ? ನಿನ್ನ ಮತ್ತು ಶಶಿರಾಜ್ ಶೆಟ್ಟಿಯ ಕೈಕಾಲು ಮುರಿದು ಹೇಗೆ ಮೂಲೆಗೆ ಕೂರಿಸಬೇಕು ಎಂದು ನನಗೆ ಗೊತ್ತು ಎಂದು ಧಮ್ಕಿ ಹಾಕಿದ್ದಾರೆ.

ಚಂದ್ರಕಾಂತ ಅವರಿಗೆ ಅಭಿಷೇಕ್ ಎಂ ಕೊಲೆ ಬೆದರಿಕೆ ಒಡ್ಡಿರುವ ಕುರಿತು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ದೂರಿನಲ್ಲಿ ಘಟನೆಯನ್ನು ಯಥಾವತ್ತಾಗಿ ವಿವರಿಸಿದ್ದಾರೆ.

error: Content is protected !!