ಬಾಡಿಗೆದಾರರಿಗೆ ಸೇರಿದಂತೆ ರಾಜ್ಯದ ಎಲ್ಲ ಗೃಹ ಬಳಕೆದಾರರಿಗೆ ಉಚಿತ ವಿದ್ಯುತ್, ಸಿಎಂ ಸ್ಪಷ್ಟನೆ:

 

 

ಬೆಂಗಳೂರು: ಬಾಡಿಗೆ ಮನೆ ಸೇರಿದಂತೆ ರಾಜ್ಯದ ಎಲ್ಲ ಗೃಹಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ಕಾಂಗ್ರೆಸ್​ ಸರ್ಕಾರ ಘೋಷಿಸಿರುವ ಉಚಿತ ವಿದ್ಯುತ್​ ನೀಡುವ ಗೃಹಜ್ಯೋತಿ ಯೋಜನೆಯಿಂದ ಬಾಡಿಗೆದಾರರು ವಂಚಿತರಾಗಲಿದ್ದಾರೆ ಎಂಬ ಆರೋಪ ಕೇಳಿ ಬರುತಿದ್ದು ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ.
ಬಾಡಿಗೆದಾರರೂ ಸೇರಿದಂತೆ ಗೃಹಬಳಕೆಯ ಎಲ್ಲರಿಗೂ ಗೃಹಜ್ಯೋತಿ ಯೋಜನೆಯ ಲಾಭ ಸಿಗಲಿದೆ. ಸರ್ಕಾರ ಘೋಷಿಸಿದಂತೆ 200 ಯೂನಿಟ್​ವರೆಗೆ ಬಾಡಿಗೆದಾರರೂ ಬಿಲ್​ ಪಾವತಿ ಮಾಡಬೇಕಿಲ್ಲ. ಸರ್ಕಾರ ಎಲ್ಲ ವರ್ಗದ ಜನರಿಗಾಗಿ ಯೋಜನೆ ರೂಪಿಸಿದೆ ಎಂದು ತಿಳಿಸಿದರು.

error: Content is protected !!