ಟ್ರಕ್ಕಿಂಗ್ ತೆರಳಿದ್ದ ಯುವಕ ಹೃದಯಾಘಾತದಿಂದ ಸಾವು..!: ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್‌ಗೆ ಚಾರಣ: ಮಾರ್ಗ ಮಧ್ಯೆಯೇ ಅಸ್ವಸ್ಥಗೊಂಡು ಕೊನೆಯುಸಿರೆಳೆದ ರಕ್ಷಿತ್..!

ಬೆಳ್ತಂಗಡಿ : ಟ್ರಕ್ಕಿಂಗ್ ತೆರಳಿದ್ದ ವೇಳೆ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿದ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರು ಮೂಲದ 7ಯುವಕರ ತಂಡ ದಕ್ಷಿಣ ಕನ್ನಡ – ಚಿಕ್ಕಮಗಳೂರು ಜಿಲ್ಲೆಗಳ ಗಡಿಭಾಗದಲ್ಲಿರುವ ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್‌ಗೆ ತೆರಳಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆಯೇ ರಕ್ಷಿತ್ (27) ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಳಿಕ ಕಳಸ ಪೊಲೀಸರು ಮೃತದೇಹವನ್ನ ಕಳಸಕ್ಕೆ ತಂದಿದ್ದಾರೆ.

error: Content is protected !!