ಹೊಸ ನ್ಯಾಯಾಲಯ ಸಂಕೀರ್ಣದ ಬೇಡಿಕೆ: ಬೆಳ್ತಂಗಡಿ ವಕೀಲರ ಸಂಘದಿಂದ ಉಸ್ತುವಾರಿ ಸಚಿವರಿಗೆ ಮನವಿ;

 

ಬೆಳ್ತಂಗಡಿ:  ಲಾಯಿಲದ ಸಂಗಮ ಸಭಾ ಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಬೆಳ್ತಂಗಡಿಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಮಂಜೂರು ಮಾಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ. ಎಸ್, ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೋಸರ್, ಕಾರ್ಯಕಾರಿ ಸಮಿತಿ ಸದಸ್ಯ ಮನೋಹರ ಕುಮಾರ್, ಇಳಂತಿಲ, ಸಂತೋಷ್ ಕುಮಾರ್ ಮತ್ತು ಕೇಶವ ಪಿ ಬೆಳಾಲು ಉಪಸ್ಥಿತರಿದ್ದರು.

error: Content is protected !!