ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ್ ಪ್ರಭು ನಿಧನ:

 

 

ಬೆಳ್ತಂಗಡಿ: ನಗರದ ಮೂರು ಮಾರ್ಗದ ಬಳಿ ಇರುವ ಗಣೇಶ್ ಹೋಟೆಲ್ ಇದರ ಮಾಲಕ ದಿವಾಕರ್ ಪ್ರಭು( 57) ಇಂದು ನಿಧನ ಹೊಂದಿದ್ದಾರೆ. ಕಳೆದ ಒಂದು ವಾರಗಳ ಹಿಂದೆ ಕುಸಿದು ಬಿದ್ದು ಕೋಮ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇದ್ದುದರಿಂದ ಶನಿವಾರ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅದರೆ ಇಂದು ಮಧ್ಯಾಹ್ನ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.‌ಕಳೆದ ಹಲವಾರೂ ವರ್ಷಗಳಿಂದ ಬೆಳ್ತಂಗಡಿ ಮೂರು ಮಾರ್ಗದ ಬಳಿ ಹೋಟೆಲ್ ಉದ್ಯಮವನ್ನು ನಡೆಸುತಿದ್ದ ಇವರು ಎಲ್ಲರೊಂದಿಗೆ ಆತ್ಮೀಯತೆಯಿಂದ ಇರುತಿದ್ದರು.

error: Content is protected !!