ಉಯ್ಯಾಲೆಯಿಂದ ಬಿದ್ದು ಬಾಲಕ ದಾರುಣ ಸಾವು: ದಿಡುಪೆಯಲ್ಲಿ ನಡೆಯಿತು ದುರಂತ ಘಟನೆ:

 

 

 

ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಡುತ್ತಿರುವ ವೇಳೆ ಆಕಸ್ಮಿಕವಾಗಿ  ಬಿದ್ದ ಪರಿಣಾಮ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ದಿಡುಪೆ ಬಳಿ ಜು 16 ರಂದು ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮಗ 8 ನೇ ತರಗತಿ ವಿದ್ಯಾರ್ಥಿ ಶ್ರೀಷಾ (13) ಮನೆಯ ಸಮೀಪ ಮರಕ್ಕೆ ಕಟ್ಟಿದ ಸೀರೆಯ  ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ  ನೆಲಕ್ಕೆ ಬಿದ್ದಿದ್ದು  ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು  ತಕ್ಷಣ   ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ  ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ.

ಬಾಲಕನ ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!