ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ದಿನಾಚರಣೆ

ಧರ್ಮಸ್ಥಳ: ಗ್ರಾಮಾಭಿವೃದ್ಧಿ ಯೋಜನೆ ಮತ್ತು ತಾಲೂಕು ಜನಜಾಗೃತಿ ಸೇವಾ ಸಮಿತಿ ಇದರ ಆಶಯದಲ್ಲಿ ಜು.15ರಂದು ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ದಿನಾಚರಣೆ ನಡೆಯಿತು.

ಕಾರ್ಯಕ್ರಮವನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರವಿಕುಮಾರ್ ಉದ್ಘಾಟಿಸಿದರು, ಸಂಪನ್ಮೂಲ ವ್ಯಕ್ತಿಯಾಗಿ ಜಯರಾಮ ಕೆ. ಮುಂಡಾಜೆ ಇವರು ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೆರಿಯ ವಲಯದ ಮೇಲ್ವಿಚಾರಕರಾದ ರಾಜೇಶ್ ಹಾಗೂ ಸೇವಾ ಪ್ರತಿನಿಧಿಯಾದ ಅನಿತಾ ಮತ್ತು ಶಶಿಕಲಾ ಜನಜಾಗೃತಿ ವೇದಿಕೆಯ ಗ್ರಾಮ ಸಮಿತಿಯ ಸದಸ್ಯರಾದ ಓಬ್ಯ ಗೌಡ ಹಾಗೂ ಶಾಲೆಯ ಎಸ್ ಡಿ ಎಂ ಸಿ ಸದಸ್ಯರಾದ ಶ್ರೀನಿವಾಸ್ ಕುಲಾಲ್ ಉಪಸ್ಥಿತರಿದ್ದರು.

error: Content is protected !!