ಕೃಷ್ಣ ಜನ್ಮಾಷ್ಟಮಿ ಸಮಿತಿ ಪಡ್ಲಾಡಿ ಲಾಯಿಲ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್ ಆಯ್ಕೆ:

 

 

ಬೆಳ್ತಂಗಡಿ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ಲಾಯಿಲ. ಇದರ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ ಪಡ್ಲಾಡಿಯಲ್ಲಿ  ಜುಲೈ 30 ರಂದು  ಸಮಿತಿಯ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

 

                            ಹರ್ಷಿತ್ ನಿನ್ನಿಕಲ್ಲು

 

ಈ ಸಂದರ್ಭದಲ್ಲಿ 2022ನೇ ಸಾಲಿನ ಕಾರ್ಯಕ್ರಮಗಳ ವರದಿಗಳನ್ನು ಕಾರ್ಯದರ್ಶಿ ಅನಿಲ್ ವಿಕ್ರಂ ಡಿಸೋಜಾ ಸಭೆಯ ಮುಂದಿಟ್ಟರು, ಜಮಾ ಖರ್ಚು ವಿವರಗಳನ್ನು ಕೋಶಾಧಿಕಾರಿ ಸಂತೋಷ್ ದರ್ಖಾಸ್ ನೀಡಿದರು. ನಂತರ 2023-24 ನೇ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

 

                   ವಿನಯ್ ಎಂ.ಎಸ್.

 

ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿಯಾಗಿ ವಿನಯ್ ಎಂ.ಎಸ್, ಕೋಶಾಧಿಕಾರಿಯಾಗಿ ಹರೀಶ್ ಕುಮಾರ್ ಎಲ್ , ಜೊತೆ ಕಾರ್ಯದರ್ಶಿಯಾಗಿ ಸುಮನ್ ಪಡ್ಲಾಡಿ, ಜೊತೆ ಕೋಶಾಧಿಕಾರಿಯಾಗಿ ರಾಜೇಶ್ ಅಂಕಾಜೆ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

                    ಹರೀಶ್ ಕುಮಾರ್ .ಎಲ್.

 

ಸಭೆಯಲ್ಲಿ ಸಪ್ಟೆಂಬರ್ 06 ರಂದು 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ  ಪ್ರಯುಕ್ತ ಪಡ್ಲಾಡಿ ಶಾಲಾ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ ಹಾಗೂ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆ ನಡೆಸುವ ಬಗ್ಗೆ ತೀರ್ಮಾನಿಸಿ  ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ  ಚರ್ಚಿಸಲಾಯಿತು. ಕೊನೆಯಲ್ಲಿ ವಿನಯ್ ಧನ್ಯವಾದವಿತ್ತರು.

error: Content is protected !!