ಬೆಳಾಲು, ವಿದ್ಯುತ್ ಶಾಕ್ , ಕೃಷಿ ಕಾರ್ಮಿಕ ಸ್ಥಳದಲ್ಲೇ ಸಾವು:

 

 

 

 

 

ಬೆಳ್ತಂಗಡಿ; ಬೆಳಾಲು ಗ್ರಾಮದ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ‌ ಆ13 ರಂದು ನಡೆದಿದೆ.

ಸುರುಳಿ ಎಂಬಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು ಮೃತ ವ್ಯಕ್ತಿ
ಬೆಳಾಲು ಗ್ರಾಮದ ನಿವಾಸಿ ಅಂಗಾರ(58) ಎಂಬವರಾಗಿದ್ದು
ಕೃಷಿಕೂಲಿ ಕಾರ್ಮಿಕರಾಗಿರುವ ಅಂಗಾರ ಅವರು ಕೆಲಸ ಮಾಡುತ್ತಿದ್ದ ವೇಳೆ ಏಣಿಯೊಂದನ್ನು ಎತ್ತಿಕೊಂಡು ಹೋಗುತ್ತಿದ್ದಾಗ ಮೇಲೆ ಹಾದು ಹೋಗಿದ್ದ
ವಿದ್ಯುತ್ ತಂತಿಗೆ ಏಣಿ ಸ್ಪರ್ಶಿಸಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅವರು ಸ್ಥಳದಲ್ಲೇ ಮೃತಪಟ್ಟಿದ್ದು. ಸ್ಥಳಕ್ಕೆ ಮೆಸ್ಕಾಂ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಪತ್ನಿ, 4 ಹೆಣ್ಣು ಮಕ್ಕಳನ್ನು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

error: Content is protected !!