ಬೆಳ್ತಂಗಡಿ: ಬೈಕೊಂದು ಇನೋವಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಪಿಲ್ಯ ಸಮೀಪ ಆ 20 ರಂದು ಮಧ್ಯಾಹ್ನ ನಡೆದಿದೆ.
ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿಲ್ಯ ಸಮೀಪದ ಕುದ್ಯಾಡಿ ಬಳಿ ಕಾರ್ಕಳದಿಂದ ಕಾರ್ಯಕ್ರಮವೊಂದಕ್ಕೆ ತೆರಳಿ ಬೆಳ್ತಂಗಡಿ ಕಡೆಗೆ ಹಿಂದಿರುಗುತಿದ್ದ ಇನೋವಾ ಕಾರಿಗೆ ಅಳದಂಗಡಿಯಿಂದ ಸುಲ್ಕೇರಿ ಕಡೆಗೆ ತೆರಳುತಿದ್ದ ಬೈಕ್ ಡಿಕ್ಕಿ ಹೊಡೆದಿದೆ .ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸ್ಥಳೀಯ ನಿವಾಸಿ ವಿಘ್ನೇಶ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡು ಹೋಗಲಾಗಿದೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.