ಬೆಳ್ತಂಗಡಿ ಮತ್ತು ವೇಣೂರು ಅರಣ್ಯಾಧಿಕಾರಿಗಳ ವರ್ಗಾವಣೆ: ಬೆಳ್ತಂಗಡಿಗೆ ಮೋಹನ್ ಕುಮಾರ್ ನೇಮಕ

ಬೆಳ್ತಂಗಡಿ : ವೇಣೂರು ವಲಯ ಮತ್ತು ಬೆಳ್ತಂಗಡಿ ವಲಯದ ಇಬ್ಬರು ಅರಣ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಲಯ ಅರಣ್ಯಾಧಿಕಾರಿಯಾಗಿರುವ ಬಿ.ಜಿ.ಮೋಹನ್ ಕುಮಾರ್ ಅವರನ್ನು ನೇಮಕ ಮಾಡಿದೆ. ಆದರೆ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಚ್.ಎಸ್ ತ್ಯಾಗರಾಜ್ ಅವರನ್ನು ಯಾವುದೇ ಜಾಗ ನೀಡದೆ ಪ್ರಾಧಿಕಾರಕ್ಕೆ ವರದಿ ಮಾಡಲು ಆದೇಶ ಮಾಡಲಾಗಿದೆ.
ವೇಣೂರು ವಲಯ ಅರಣ್ಯಾಧಿಕಾರಿಯಾಗಿದ್ದ ಮಹೀಮ್ ಎಮ್ ಜನ್ನು ಅವರನ್ನು ದಾಂಡೇಲಿ ವಲಯ ಅರಣ್ಯಾಧಿಕಾರಿ ಲೀಗಲ್&ಐ.ಸಿ.ಟಿ ಗೆ ವರ್ಗಾವಣೆ ಮಾಡಲಾಗಿದ್ದು , ಉಡುಪಿ ವಲಯ ಅರಣ್ಯಾಧಿಕಾರಿಯಾಗಿರುವ ಸುಬ್ರಹ್ಮಣ್ಯ ಆಚಾರಿ ಅವರನ್ನು ವೇಣೂರು ವಲಯ ಅರಣ್ಯಾಧಿಕಾರಿಯಾಗಿ ನೇಮಕ ಮಾಡಿದೆ.

error: Content is protected !!