ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಹಠಾತ್ ನಿಂತ 14 ತಿಂಗಳ ಮಗುವಿನ ಹೃದಯ..!: ಮಾರ್ಗ ಬದಲಾಯಿಸಿದ ಪೈಲಟ್‍ಗಳು: ನಾಗಪುರದಲ್ಲಿ ತುರ್ತು ಭೂಸ್ಪರ್ಶ : ‘ವೈದ್ಯೋ ನಾರಾಯಣೋ ಹರಿ’ :ಮಗುವಿನ ಎದೆ ಬಡಿತ ಮತ್ತೆ ಆರಂಭ..!


ಮಹಾರಾಷ್ಟ್ರ:
ಬೆಂಗಳೂರಿನಿಂದ ನವದೆಹಲಿಗೆ ತೆರಳಬೇಕಿದ್ದ ವಿಸ್ತಾರಾ ವಿಮಾನ. 14 ತಿಂಗಳ ಮಗು ಹಾಗೂ ಎಲ್ಲಾ ಪ್ರಯಾಣಿಕರು ಆಕಾಶದೆತ್ತರ ಹಾರುತ್ತ ಪ್ರಯಾಣಿಸುತ್ತಿರಬೇಕಾದರೆ ಆ ಕಂದನ ಹೃದಯ ಹಠಾತ್ ನಿಂತೇ ಬಿಟ್ಟಿತು. ಮೊದಲೇ ಹೃದಯ ಸಮಸ್ಯೆ ಇದ್ದುದರಿಂದ ಮಗುವಿನ ಸ್ಥಿತಿ ತೀರ ಹದಗೆಟ್ಟಿತು. ವಿಮಾನದಲ್ಲಿದ್ದ ವೈದ್ಯರು ತಕ್ಷಣವೇ ಮಗುವನ್ನು ಪರೀಕ್ಷಿಸಿದರು. ಮಗುವಿನ ಸ್ಥಿತಿ ಹದಗೆಟ್ಟು ಉಸಿರಾಟ ಸ್ಥಗಿತಗೊಂಡಿದ್ದು, ವಿಮಾನದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಕೂಡಲೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೈದ್ಯರ ಜೊತೆ ಸಹ ಪ್ರಯಾಣಿಕರು ಕೈ ಜೋಡಿಸಿದರು. ಮಗುವಿಗೆ ಸಿಪಿಆರ್ ನೀಡಿದರು ಮತ್ತು ಸಾಧ್ಯವಾದಷ್ಟು ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನು ಮಾಡಿದರು. ಲಭ್ಯವಿರುವ ಸಂಪನ್ಮೂಲಗಳ ಸಹಾಯದಿಂದ 45 ನಿಮಿಷ ಹೆಣ್ಣು ಮಗುವಿಗೆ ಚಿಕಿತ್ಸೆ ನೀಡಲಾಯಿತು. ಆಶ್ಚರ್ಯವೆಂಬಂತೆ ಸಿಪಿಆರ್ ಬಳಿಕ ಮಗು ಉಸಿರಾಡತೊಡಗಿದೆ. ಆದರೂ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುಬೇಕಾಗಿದೆ ಎಂದು ವೈದ್ಯರು ಸೂಚಿಸಿದರು. ಮಗುವಿನ ಗಂಭೀರ ಸ್ಥಿತಿಯನ್ನು ನೋಡಿದ ವಿಮಾನಯಾನ ತಂಡವು ತುರ್ತು ಭೂಸ್ಪರ್ಶಕ್ಕಾಗಿ ನಾಗ್ಪುರ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಸಂಪರ್ಕಿಸಿತ್ತು. ಬಳಿಕ ಅಧಿಕಾರಿಗಳು ತುರ್ತು ಭೂಸ್ಪರ್ಶಕ್ಕೆ ಅನುಮತಿ ನೀಡಿದರು. ವಿಮಾನಯಾನದ ಮಾರ್ಗವನ್ನು ಬದಲಾಯಿಸಿದ ಪೈಲಟ್‌ಗಳು ನಾಗ್ಪುರ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದರು. ಆದಾಗಲೇ ವಿಮಾನ ನಿಲ್ದಾಣದಲ್ಲಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲು ಕಿಮ್ಸ್-ಕಿಂಗ್ಸ್ವೇ ಆಸ್ಪತ್ರೆಯ ಆಂಬ್ಯುಲೆನ್ಸ್ ಸಿದ್ಧವಾಗಿ ನಿಂತಿತ್ತು. ವಿಮಾನ ಇಳಿದ ತಕ್ಷಣ ಮಗುವನ್ನು ಆದಷ್ಟು ಬೇಗ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕಂದಮ್ಮನ ಜೀವ ಉಳಿಸಲು ಡಾ. ನವದೀಪ್ ಕೌರ್ (ಅರಿವಳಿಕೆ ವಿಭಾಗ), ಡಾ. ದಮನ್‌ದೀಪ್ ಸಿಂಗ್ (ಕಾರ್ಡಿಯಾಕ್ ರೇಡಿಯಾಲಜಿ), ಡಾ. ರಿಷಭ್ ಜೈನ್ (ಮಾಜಿ ಂIIಒS ರೇಡಿಯಾಲಜಿ), ಡಾ. ಓಶಿಕಾ (sಡಿ ಔಃಉ) ಮತ್ತು ಡಾ. ಅವಿಚ್ಲಾ ತಕ್ಸಕ್ (ಡಿ ಕಾರ್ಡಿಯಾಕ್ ವಿಕಿರಣಶಾಸ್ತ್ರ) ಅವರುಗಳು ತಕ್ಷಣವೇ ಸ್ಪಂದಿಸಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಮಗು ಡಾ. ಕುಲದೀಪ್ ಸುಖದೇವ್ ಅವರ ಆರೈಕೆಯಲ್ಲಿದೆ. ಆದರೆ ಮಗು ಇನ್ನೂ ಪ್ರಜ್ಞಾಹೀನವಾಗಿದೆ ಮತ್ತು ಗಂಭೀರ ಸ್ಥಿತಿಯಲ್ಲಿದ್ದು ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ಕುಟುಂಬ ಮತ್ತು ಸಂಬಂಧಿಕರಿಗೆ ವೈದ್ಯಾಧಿಕಾರಿಗಳು ಧೈರ್ಯ ತುಂಬಿದ್ದಾರೆ.

error: Content is protected !!