ಕೊನೆಗೂ ಧರ್ಮಸ್ಥಳ ನಾರಾವಿ ಬಸ್ ಸಂಚಾರಕ್ಕೆ ಮುಹೂರ್ತ ಫಿಕ್ಸ್ : ಸೆ.11 ರಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಳ್ತಂಗಡಿ ಭೇಟಿ

ಬೆಳ್ತಂಗಡಿ: ಹಲವು ವರ್ಷಗಳ ಬೇಡಿಕೆಯಾಗಿದ್ದ ಧರ್ಮಸ್ಥಳ – ನಾರಾವಿ ಸರಕಾರಿ ಬಸ್ ಸಂಚಾರಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

ವಿವಿಧ ಸರಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಸೆ.11ರಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್‌ರವರು ಬೆಳ್ತಂಗಡಿಗೆ ಆಗಮಿಸಲಿದ್ದು ಈ ಸಂದರ್ಭದಲ್ಲಿ ಧರ್ಮಸ್ಥಳ – ನಾರಾವಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಅಳದಂಗಡಿಯಲ್ಲಿ ಚಾಲನೆ ನೀಡಲಿದ್ದಾರೆ.

ಬೆಳ್ತಂಗಡಿಯ ನೂತನ ತಾಲೂಕು ಪಂಚಾಯತ್ ಕಟ್ಟಡದ ಉದ್ಘಾಟನೆ, ಹಕ್ಕುಪತ್ರ ವಿತರಣೆ ಮತ್ತು ವೇಣೂರು ಮಸ್ತಕಾಭಿಷೇಕದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇವರ ಜೊತೆಗೆ ಮಾಜಿ ಶಾಸಕರಾದ ಕೆ ವಸಂತ ಬಂಗೇರ , ವಿಧಾನ ಪರಿಷತ್ ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ,ಸೇರಿದಂತೆ ಹಲವಾರೂ ಗಣ್ಯರು ಭಾಗಿಗಳಾಗಲಿದ್ದಾರೆ.

error: Content is protected !!