ಮುಂಡಾಜೆ: ಬೆಂಗಳೂರಿನ ಅಶೋಕ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಸೆ.3 ರಂದು ನಡೆದ ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಉದಯವಾಣಿಯ ಗುರು ಮುಂಡಾಜೆ ಮತ್ತು ವಾಣಿ ದಂಪತಿಯ ಪುತ್ರಿಯಾಗಿರುವ ಇವರು ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆಯಲ್ಲಿ 13ನೇ ರಾಂಕ್ ಪಡೆದಿದ್ದಾರೆ. ಡಿ. 30 ರಂದು ಕೊಯಂಬತ್ತೂರಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.