ಉಜಿರೆ ಚಿನ್ನಾಭರಣ ಕಳ್ಳತನಗೈದ ಆರೋಪಿ ಬಂಧನ: ಮೈಸೂರಿನಲ್ಲಿ ಸೆರೆ ಹಿಡಿದ ಬೆಳ್ತಂಗಡಿ ಪೊಲೀಸರು: ಹಲವಾರು ಕಳ್ಳತನ ಪ್ರಕರಣದಲ್ಲಿ ಭಾಗಿ..!

 

 

ಬೆಳ್ತಂಗಡಿ : ಉಜಿರೆ ಗ್ರಾಮದ ಕಲ್ಲೆ ನಿವಾಸಿ ಫೆಲಿಕ್ಸ್ ಎಂಬವರ ಮನೆಗೆ ಅಗಸ್ಟ್ 12 ರಂದು ಹಗಲು ಹೊತ್ತಿನಲ್ಲಿ ಯಾರು ಇಲ್ಲದ ವೇಳೆ ಹಿಂಬಾಗಿಲಿನ ಮೂಲಕ ನುಗ್ಗಿ 15 ಪವನ್ ಚಿನ್ನಾಭರಣ ಮತ್ತು 20 ಸಾವಿರ ಹಣ ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗುತ್ತಿತ್ತು. ಇದೀಗ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಜಿಲ್ಲೆಯ ಕನ್ಯಾಕುಮಾರಿ ನಿವಾಸಿ ಉಮೇಶ್ ಬಳೆಗಾರ(46) ಎಂಬತನನ್ನು ಮೈಸೂರು ಜಿಲ್ಲೆಯ ಝೂ ಪಾರ್ಕ್ ನಲ್ಲಿ ಸ.26 ರಂದು ವಶಕ್ಕೆ ಪಡೆದು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಎರಡು ದಿನ ಪೊಲೀಸ್ ಕಸ್ಟಡಿಗೆ ಪಡೆದಿದ್ದರು.  ಕದ್ದ ಚಿನ್ನಾಭರಣವನ್ನು ಮೈಸೂರಿನಿಂದ  ವಶಪಡಿಸಿಕೊಳ್ಳಲಾಗಿದೆ. ಸ.28 ರಂದು(ಇಂದು) ಕಳ್ಳತನ ನಡೆಸಿದ ಉಜಿರೆ ಮನೆಗೆ ಬೆಳ್ತಂಗಡಿ ಪೊಲೀಸರು ಕರೆದುಕೊಂಡು ಹೋಗಿ ಮಹಜರು ನಡೆಸಿದ್ದಾರೆ.

 

 

 

ಆರೋಪಿ ಉಮೇಶ್ ಬಳೆಗಾರ ಮೂಲತಃ ಆಂದ್ರಪ್ರದೇಶದವನಾಗಿದ್ದು ಮೊದಲ ಪತ್ನಿಗೆ ಮೂವರು ಮಕ್ಕಳಿದ್ದು ಮಕ್ಕಳು ಕೂಡ ಕಳ್ಳತನದಲ್ಲಿ ಪರಿಣತಿ ಹೊಂದಿದ್ದಾರೆ. ಮೊದಲ ಪತ್ನಿ ಸಾವನ್ನಪ್ಪಿದ ಬಳಿಕ ತಮಿಳುನಾಡಿನ ಕನ್ಯಾಕುಮಾರಿಯ ಮಹಿಳೆಯನ್ನು ಎರಡನೇ ಮದುವೆಯಾಗಿ ಎರಡು ಮಕ್ಕಳನ್ನು ಪಡೆದಿದ್ದ. ಅಂದಿನಿಂದ ಎರಡನೇ ಪತ್ನಿ ಊರಿನಲ್ಲಿ ವಾಸವಾಗುತ್ತಿದ್ದ. ಈತನಿಗೆ ಹೃದಯ ಸಂಬಂಧಿ ಕಾಯಿಲೆ ಇದ್ದು. ತನ್ನ 14 ನೇ ವಯಸ್ಸಿನಲ್ಲಿ ಅಂದರೆ 1994 ರಿಂದ ಕಳ್ಳತನಕ್ಕೆ ಇಳಿದಿದ್ದ ನಟೋರಿಯಸ್ ಉಮೇಶ್ 9 ಭಾಷೆ ಮಾತನಾಡುತ್ತಾನೆ.

 

 

 

 

ತಮಿಳುನಾಡು ರಾಜ್ಯದಲ್ಲಿ 14 ಪ್ರಕರಣ, ಕೇರಳ ರಾಜ್ಯದಲ್ಲಿ 10 ಪ್ರಕರಣ , ಆಂದ್ರ ಪ್ರದೇಶ ರಾಜ್ಯದಲ್ಲಿ 5 ಕೇಸ್ ಹಾಗೂ ಕರ್ನಾಟಕ ರಾಜ್ಯದ ಬೆಂಗಳೂರು, ಮೈಸೂರು, ಉಡುಪಿ ,ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಕನ್ನಡದಲ್ಲಿ ಪುತ್ತೂರು , ಬಂಟ್ವಾಳ,ಮೂಡಬಿದಿರೆ, ಬೆಳ್ತಂಗಡಿಯಲ್ಲಿ ಪ್ರಕರಣ ಇದೆ. ಸದ್ಯ ಇತ್ತೀಚಿನ ಕೇಸ್ ನಲ್ಲಿ ಆರೋಪಿ ಉಮೇಶ್ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿ ಮತ್ತು ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣ ತನಿಖೆ ಬಾಕಿ ಇದೆ. ಆರೋಪಿ ಕಳ್ಳತನ ಪ್ರಕರಣದಲ್ಲಿ ಉಡುಪಿ ಜಿಲ್ಲೆಯ ಹಿರಿಯಡ್ಕ ಸಬ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಾ ಇರುವಾಗ ನಟೋರಿಸ್ ರೌಡಿ ಪಿಟ್ಟಿ ನಾಗೇಶ್ ಸೂಚನೆಯ ಮೇರೆಗೆ 2011 ರ ಜನವರಿ 14 ರಂದು ಸಹಕೈದಿ ನಟೋರಿಯಸ್ ರೌಡಿ ಶೀಟರ್ ವಿನೋದ್ ಶೆಟ್ಟಿಗಾರ್ ಎಂಬತನನ್ನು ಹೊರಗಿನಿಂದ ಕೇಕ್ ನೊಳಗೆ ಬಂದಿದ್ದ ಆಯುಧದಿಂದ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಈತನು ಕೂಡ ಆರೋಪಿಯಾಗಿದ್ದಾ‌ನೆ.
ಹಲವು ಭಾರಿ ರಾಜ್ಯದ ವಿವಿಧೆಡೆ ಕಳ್ಳತನ ಪ್ರಕರಣದಲ್ಲಿ ರಾಜ್ಯದ ವಿವಿಧ ಜೈಲಿನಲ್ಲಿದ್ದ. ಜಾಮೀನು ಪಡೆದು ಹೊರಬಂದ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರಾಗುತ್ತಿರಲ್ಲಿಲ್ಲ ಇದಕ್ಕಾಗಿ ಈತನ ಮೇಲೆ ನಾಲ್ಕು ರಾಜ್ಯದ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗುತ್ತಿತ್ತು.ಇದಕ್ಕಾಗಿ ನಾಲ್ಕು ರಾಜ್ಯದ ಪೊಲೀಸರು ರಾತ್ರಿ ಹಗಲು ಹುಡುಕಾಟ ನಡೆಸುತ್ತಿದ್ದರು‌.

ತನ್ನ ಕಳ್ಳತನ ಕೃತ್ಯಕ್ಕೆ ಹೋಗುವಾಗ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಿ ಸ್ಥಳೀಯ ವಸತಿ ಗೃಹ ಅಥವಾ ಲಾಡ್ಜ್ ಪಡೆದುಕೊಂಡು ಎರಡು ಮೂರು ದಿನ ಉಳಿದುಕೊಳ್ಳುತ್ತಿದ್ದರು . ಅವರನ್ನು ಬಿಟ್ಟು ಈತ ಹಗಲಿನಲ್ಲಿ ಒಂಬಟ್ಟಿಯಾಗಿ ಹೋಗಿ ಕಳ್ಳತನ ಮಾಡಿ ಬಂದು ನಂತರ ಬೇರೆ ಜಿಲ್ಲೆಗೆ ಹೋಗಿ ರೂಂ ಮಾಡಿಕೊಂಡು ಇರುತ್ತಿದ್ದ.

ಕಳ್ಳತನ ನಡೆದ ದಿನ ಮನೆಯಲ್ಲಿ ಸಾಕ್ಷಾಧಾರಗಳನ್ನು ಸಂಗ್ರಹಿಸಿ ನಂತರ ಸಿಸಿಕ್ಯಾಮರ ಮತ್ತು ಟೆಕ್ನಿಕಲ್ ಸಾಕ್ಷಾಧಾರದಲ್ಲಿ ತನಿಖೆಗಿಳಿದ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡದ ಸಿಬ್ಬಂದಿಗಳು ಬೆಂಗಳೂರು ,ಮೈಸೂರು ಸೇರಿ ವಿವಿಧೆಡೆ ರಾತ್ರಿ ಹಗಲು ಸಂಚಾರಿಸಿ ಆರೋಪಿಗಾಗಿ ಶೋಧ ಕಾರ್ಯ ನಡೆಸಿತ್ತು ಕೊನೆಗೂ ಒಂದು ತಿಂಗಳ ಕಾರ್ಯಾಚರಣೆ ಬಳಿಕ ಆರೋಪಿ ಕುಖ್ಯಾತ ಕಳ್ಳ ಉಮೇಶ್ ಬಳೆಗಾರ ನನ್ನು ಮೈಸೂರು ಝೂ ಪಾರ್ಕ್ ನಲ್ಲಿ ಬಲೆಗೆ ಕೆಡವಿದ್ದಾರೆ.

ಇನ್ನು ಬೆಳ್ತಂಗಡಿ ಪೊಲೀಸರ ವಿಚಾರಣೆ ವೇಳೆ ಈ ವಾರದಲ್ಲಿ ಆರೋಪಿ ಉಮೇಶ್ ಬಳೆಗಾರ ಉಜಿರೆಯ ಒಂದು ದೊಡ್ಡ ಮನೆಯನ್ನು ಗುರುತಿಸಿ ದರೋಡೆಗೆ ಸಂಚು ರೂಪಿಸಿದ್ದ ಬಳಿಕ ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶವನ್ನು ಗುರುತಿಸಿ ಕಳ್ಳತನ ಮಾಡಲು ರೂಪುರೇಷೆ ಸಿದ್ದಪಡಿಸಿದ್ದ ಅಘಾತಕಾರಿ ಮಾಹಿತಿ ಬಾಯಿಬಿಟ್ಟಿದ್ದ ಎನ್ನಲಾಗಿದೆ.

ಪಿಎಸ್ಐ ಧನರಾಜ್ ಟಿ.ಎಮ್, ಹಾಗೂ ಚಂದ್ರ ಶೇಖರ್ ಎ.ಎಮ್, ಪಿಎಸ್ಐ ಕೆ.ಜೆ. ತಿಲಕ್ , ಶಿವರಾಮ ನಾಯ್ಕ, ಹೆಚ್. ಸಿ.ಗಳಾದ ಬೆನ್ನಿಚ್ಚನ್, ಸುಂದರ ಶೆಟ್ಟಿ, ಪಳನಿವೇಲು, ಪ್ರಮೋದ್, ಇಬ್ರಾಹಿಂ, ಪಿ.ಸಿಗಳಾದ ಚರಣ್ ರಾಜ್, ಆನಂದ, ಹಾಗೂ ಜಿಲ್ಲಾ ಗಣಕ ಯಂತ್ರ ವಿಭಾಗದ ದಿವಾಕರ್ ಹಾಗೂ ಸಂಪತ್ ಇವರುಗಳ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

error: Content is protected !!