ಹಾಸ್ಯ ನಟರ ‘ಕಸರತ್ತ್’ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ : ಸ್ವಯಂ ಪ್ರಭ ಎಂಟರ್ಟೈ ನ್ಮೆಂಟ್  ಆಂಡ್ ಪ್ರೊಡಕ್ಷನ್ಸ್ ಹಾಗೂ ಬೋಧಿ ಪ್ರೊಡಕ್ಷನ್ ಪ್ರಸ್ತುತ ಪಡಿಸುವ, ಟಾಕೀಸ್ ಆಪ್ ನಲ್ಲಿ ಬಿಡುಗಡೆಗೊಳ್ಳಲಿರುವ ಯುವ ಪ್ರತಿಭೆ ತುಷಾರ್ ಹೆಗ್ಡೆ ವೇಣೂರು ನಿರ್ದೇಶಿಸಿದ ತುಳು ವೆಬ್ ಸೀರೀಸ್ ಕಸರತ್ತ್ ಇದರ ಮೊದಲ ಪೋಸ್ಟರ್ ಬಿಡುಗಡೆಗೊಂಡಿದೆ.

 

ಹಾಸ್ಯ ನಟರ ಕಸರತ್ತ್ : ಕಸರತ್ತ್ ತುಳು ವೆಬ್ ಸೀರೀಸ್ ನಲ್ಲಿ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಜೀ ಕನ್ನಡ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಿತೇಶ್ ಕಾಪಿನಡ್ಕ, ಸೂರಜ್ ಕುಮಾರ್, ರಾಕೇಶ್ ಪೂಜಾರಿ ಮುಖ್ಯ ಭೂಮಿಕೆಯ ಈ ಸೀರೀಸ್ ನಲ್ಲಿ ನವ್ಯಾ ಪೂಜಾರಿ ನಾಯಕಿಯಾಗಿ ನಟಿಸಿದ್ದಾರೆ . ಮೊದಲ ಬಾರಿಗೆ ಜೀ ಕನ್ನಡ ಕಾಮಿಡಿ ಖಿಲಾಡಿ ಅನೀಶ್ ಅಮೀನ್ ವೇಣೂರು ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ ಜೊತೆಗೆ ಮುಖ್ಯ ಪಾತ್ರಗಳಲ್ಲಿ ಜೀ ಕನ್ನಡ ಕಾಮಿಡಿ ಖಿಲಾಡಿ ಖ್ಯಾತಿಯ ಪ್ರವೀಣ್ ಜೈನ್, ಧೀರಜ್ ನೀರುಮಾರ್ಗ, ರಾಧೇಶ್ ಶೆಣೈ, ದಿವ್ಯ ಅಂಚನ್ ವೇಣೂರು ನಟಿಸಿದ್ದಾರೆ.

ಜೊತೆಗೆ ಚಂದ್ರಶೇಖರ್ ಹೊಕ್ಕಡಿಗೋಳಿ, ಮನೀಶ್ ಶೆಟ್ಟಿ, ಸುಕೇಶ್ ವೇಣೂರು, ದೀಕ್ಷಿತ್ ಅಂಡಿಂಜೆ, ನಿಶಿತ್ ಶೆಟ್ಟಿ ಮುಂತಾದ ಕಾಮಿಡಿ ದಿಗ್ಗಜರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಕೆ.ರತ್ನಾಕರ್ ಕಾಮತ್ ಅವರು ನಿರ್ಮಿಸಿ, ಗಣೇಶ್ ಎಂ ಉಜಿರೆ, ರಿತೇಶ್ ಗೌಡ ವೇಣೂರು, ನೆಲ್ವಿಸ್ಟರ್ ಗ್ಲಾನ್ ಪಿಂಟೋ ಸಹಕಾರದ ಈ ಚಿತ್ರಕ್ಕೆ ಮಾನಸ ಹೊಳ್ಳ ಅವರ ಸಂಗೀತ, ಸಂತೋಷ್ ಗುಂಪಾಲಜೆ ಅವರ ಛಾಯಾಗ್ರಾಹಣ, ಗಣೇಶ್ ನಿರ್ಚಲ್ ಅವರ ಸಂಕಲನ, ಸುಕೇಶ್ ಶೆಟ್ಟಿ ಅವರ ಸಾಹಿತ್ಯ, ಕಾಮಿಡಿ ಕಿಲಾಡಿ ಸೂರಜ್ ಕುಮಾರ್ ಅವರ ನೃತ್ಯ ನಿರ್ದೇಶನ, ಅವಿನಾಶ್ ನಾತು ಮತ್ತು ಪ್ರಣೀತ್ ಜೈನ್ ಅವರ ಕಲೆ ಈ ಚಿತ್ರಕ್ಕಿದೆ. ಸ್ಮಿತೇಶ್ ಎಸ್ ಬಾರ್ಯ ಮತ್ತು ಅನೀಶ್ ಅಮೀನ್ ವೇಣೂರು ತಾಂತ್ರಿಕ ಮೇಲ್ವಿಚಾರಣೆಯ ಚಿತ್ರಕ್ಕೆ ದೀಕ್ಷಿತ್ ಕೆ ಅಂಡಿಂಜೆ ನಿರ್ಮಾಣ ನಿರ್ವಹಣೆ ಇದೆ. ವಿನಯ್ ಕುಮಾರ್ ಉಜಿರೆ, ನಿರಾಜ್ ಕುಂಜಾರ್ಪ, ದೀಕ್ಷಿತ್ ಭಂಡಾರಿ, ನಿಶಿತ್ ಶೆಟ್ಟಿ ನಿರ್ದೇಶನ ತಂಡದಲ್ಲಿ ಸಹಕಾರಿಸಿದ್ದಾರೆ. ಈ ಸೀರೀಸ್ ಆದಷ್ಟು ಶೀಘ್ರದಲ್ಲಿ ಟಾಕೀಸ್ ಆಪ್ ನಲ್ಲಿ ಬಿಡುಗಡೆಗೊಳ್ಳಲಿ

error: Content is protected !!