ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜವಾಹರಲಾಲ್ ನೆಹರು ಜಯಂತಿ ಆಚರಣೆ.

 

 

ಬೆಳ್ತಂಗಡಿ:.ಸ್ವಾತಂತ್ರ್ಯ ಚಳುವಳಿಯ ಮುಂಚೂಣಿ ನಾಯಕರು, ಭಾರತದ ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಶ್ರೀ ಜವಾಹರಲಾಲ್ ನೆಹರು ಅವರ ಜಯಂತಿಯನ್ನು ಇಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಉಬಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ಣ,ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ರೋಯಿ ಜೋಸೆಫ್ ಪುದುವೆಟ್ಟು ,ಕಾಂಗ್ರೆಸ್ ಪದವಿದರ ಘಟಕದ ಅಧ್ಯಕ್ಷರಾದ ಇಸ್ಮಾಯಿಲ್ ಕೆ ಪೆರಿಂಜೆ ,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮಹಮ್ಮದ್ ಹನೀಪ್ ಕಾಶಿಬೆಟ್ಟು , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷರಾದ ಅಬ್ದುಲ್‌ ಗಪೂರ್ ಪುದುವೆಟ್ಟು, ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು.
ವೀರೇಂದ್ರ ಕುಮಾರ್ ಜೈನ್ ನಾವರ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ವಿನುತ ರಜತ್ ಗೌಡ ಧನ್ಯವಾದ ಸಲ್ಲಿಸಿದರು.

error: Content is protected !!