ಯಕ್ಷಧ್ರುವ ಪಟ್ಲ ಫೌಂಡೇಶನ್ , “ಯಕ್ಷ ಸಂಭ್ರಮ” ಆಮಂತ್ರಣ ಪತ್ರಿಕೆ ಬಿಡುಗಡೆ: ಡಿ 02 ರಂದು ಉಜಿರೆ ರಥ ಬೀದಿಯಲ್ಲಿ ಕಾರ್ಯಕ್ರಮ:

 

 

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 02  ಶನಿವಾರ  ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥ ಬೀದಿಯಲ್ಲಿ ನಡೆಯಲಿರುವ *ಯಕ್ಷ ಸಂಭ್ರಮ- 2023* ಇದರ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡುವೆಟ್ನಾಯ ನ 23 ಗುರುವಾರ  ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪ್ರ. ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ, ಗೌರವ ಸಲಹೆಗಾರರಾದ ಶ್ರೀ ಭುಜಬಲಿ ಧರ್ಮಸ್ಥಳ, ರಘುರಾಮ್ ಶೆಟ್ಟಿ ಉಜಿರೆ, ಕೋಶಾಧಿಕಾರಿ ಆದರ್ಶ್ ಜೈನ್ ಗುರುವಾಯನಕೆರೆ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ, ಸಲಹೆಗಾರರಾದ ವಸಂತ ಸುವರ್ಣ ಲಾಯಿಲ, ಮಂಜುನಾಥ ಶೆಟ್ಟಿ ನಿಡಿಗಲ್, ಕೃಷ್ಣ ಕುಮಾರ ಪಂಜಿರ್ಪು ಜಗದೀಶ್ ಕನ್ನಾಜೆ, ವಿಶ್ವನಾಥ ಶೆಟ್ಟಿ, ರಸರಾಗ ಉಜಿರೆ,ತುಕರಾಮ್, ಪ್ರಸಾದ್ ಶೆಟ್ಟಿ ಎಣಿಂಜೆ, ಲೀಲಾ ಶೆಟ್ಟಿ, ವನಿತಾ. ವಿ. ಶೆಟ್ಟಿ, ವಿನಯ ಸಿ. ರೈ
ಸೇರಿದಂತೆ ಇತರರು ಉಪಸ್ಥಿತರಿದ್ದರು.

error: Content is protected !!