ಬೆಳ್ತಂಗಡಿ : ಲಾರಿ ಚಾಲಕನ ನಿರ್ಲಕ್ಷ್ಯತನ : ಇಬ್ಬರು ಬೈಕ್ ಸವಾರರು ಸಾವು ಪ್ರಕರಣ : ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯದಿಂದ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

ಬೆಳ್ತಂಗಡಿ : ಲಾರಿ ಚಾಲಕನನಿರ್ಲಕ್ಷ್ಯತನದ ಚಾಲನೆಯಿಂದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಇಬ್ಬರ ಸಾವಿಗೆ ಕಾರಣವಾದ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟಿಸಿದೆ.

2022 ಜನವರಿ 01ರಂದು ಮಿಸ್ಸಾವುದ್ದೀನ್ ಹಾಗೂ ಅಸ್ಮಾನ್ ಎಂಬವರು ರಾತ್ರಿ ಸುಮಾರು 8:30 ರ ವೇಳೆಗೆ ಮಡಂತ್ಯಾರು ಕಡೆಯಿಂದ ಗುರುವಾಯನಕೆರೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭ, ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಈಚರ್ ಲಾರಿಯು ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರ ಗಾಯಗೊಂಡ ಇಬ್ಬರೂ ಬೈಕ್ ಸವಾರರು ಸಾವನ್ನಪ್ಪಿದ್ದರು.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ U/s 279,304(A) IPC & Sec 5(1) r/w 180 IMV ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ನ್ಯಾಯಾಲಯಕ್ಕೆ ಪೊಲೀಸರು ದೋಷರೋಷ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯಾಗಿ ನವೆಂಬರ್ 25 ರಂದು ಆರೋಪಿ ಮಹಮ್ಮದ್ ಸಿನಾನ್‌ಗೆ ನ್ಯಾಯಾಲಯವು ದಂಡ ಹಾಗೂ ಶಿಕ್ಷೆ ಪ್ರಕಟ ಮಾಡಿದೆ.

ದಂಡ ಹಾಗೂ ಶಿಕ್ಷೆ ಪ್ರಮಾಣ: U/s 279 IPC UÉ 1 ತಿಂಗಳ ಕಾರಾಗೃಹ ವಾಸ ಮತ್ತು 1,000 ರೂಪಾಯಿ ದಂಡ ಮತ್ತು ಕಲಂ 304(A) IPC ಗೇ ಎರಡು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1,000 ರೂಪಾಯಿ ದಂಡ, ದಂಡ ಕಟ್ಟಲು ತಪ್ಪಿದಲ್ಲಿ 1 ತಿಂಗಳ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಆದೇಶಿಸಿದೆ.

ಪ್ರಕರಣದ ತನಿಖಾಧಿಕಾರಿಗಳು: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿದ್ದ ಓಡಿಯಪ್ಪ ಗೌಡ ಪ್ರಕರಣದ ಎಫ್ಐಆರ್ ಮಾಡಿದ್ದು, ತನಿಖಾಧಿಕಾರಿಯಾಗಿ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿಯನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅಗಿದ್ದ ಶಿವಕುಮಾರ್ ಸಲ್ಲಿಸಿದ್ದರು. ಇವರಿಗೆ ಸಹಾಯಕರಾಗಿ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ರಾಮಚಂದ್ರ ಕರ್ತವ್ಯ ನಿರ್ವಹಿಸಿದ್ದರು.

error: Content is protected !!