ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿಗಳು ಆತ್ಮಹತ್ಯೆ..!

 

 

ಉಡುಪಿ:  ಸಮಾಜ ಸೇವಕ  ಕಾಪು ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರ ಶೆಟ್ಟಿ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ರಾತ್ರಿ ನಡೆದಿದೆ. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.ಅಶಕ್ತರ ಬಗ್ಗೆ ಕಾಳಜಿ ವಹಿಸುತಿದ್ದ ಅವರು ಯಾವಾಗಲೂ ಸಮಾಜ ಪರ ಕಾರ್ಯಗಳಲ್ಲಿ ತನನ್ನು ತಾನು ತೊಡಗಿಸಿಕೊಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.  ಪ್ರಸಿದ್ಧ ಕಲಾವಿದರನ್ನೊಳಗೊಂಡ ರಂಗತರಂಗ ನಾಟಕ ತಂಡವನ್ನು, ರಚಿಸಿ ಮುನ್ನಡೆಸಿಕೊಂಡು ಹೋಗುತಿದ್ದ ಇವರು ಕಾಪು ವಿಧಾನ ಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು  ಬಂಟರ ಸಂಘದ ಅಧ್ಯಕ್ಷ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಆತ್ಮಹತ್ಯೆಗೆ  ಕಾರಣ ತಿಳಿದು ಬಂದಿಲ್ಲ ಪೊಲೀಸ್ ತನಿಖೆಯ ನಂತರವಷ್ಟೆ ಮಾಹಿತಿ ತಿಳಿದು ಬರ ಬೇಕಾಗಿದೆ.

error: Content is protected !!