ಕಡಬ: ರಬ್ಬರ್ ಟ್ಯಾಪಿಂಗ್ ಕಾರ್ಮಿಕರನ್ನು ಬೆನ್ನಟ್ಟಿದ ಕಾಡಾನೆಗಳು..!

ಕಡಬ: ರಬ್ಬರ್ ನಿಗಮದ ಟ್ಯಾಪಿಂಗ್ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಡಿ.16ರಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಕೊಣಾಜೆ ರಬ್ಬರ್ ತೋಟದಲ್ಲಿ ನಡೆದಿದೆ.

ಇಂದು ಮುಂಜಾನೆ ರಬ್ಬರ್ ನಿಗಮದ ಟ್ಯಾಪಿಂಗ್ ಕಾರ್ಮಿಕರಾದ ರಾಜಗೋಪಾಲ್ (49), ಮೇಸ್ತ್ರಿ ನಾಗಪ್ಪ (53) ಹಾಗೂ ಶಿವರಾಜ್ (43) ಎಂಬವರು ಕೆಲಸದಲ್ಲಿ ನಿರತರಾಗಿದ್ದಾಗ ಕಾಡಾನೆಗಳು ಕಾಣಿಸಿಕೊಂಡು ಬೆನ್ನಟ್ಟಿದ್ದು ಭಯಭೀತರಾದ 3 ಜನ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಬಿದ್ದು ತರಚಿದ ಗಾಯಗಳಾಗಿದ್ದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ್ದಾರೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಅರಣ್ಯ ಸಿಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

error: Content is protected !!