ಶಿಶಿಲ : ಕುಡಿದ ಮತ್ತಿನಲ್ಲಿ ಪತ್ನಿ, ಮಗಳ ಮೇಲೆ ಮಾರಣಾಂತಿಕ ಹಲ್ಲೆ : ಪತ್ನಿಯ ಕಣ್ಣಿಗೆ ಮತ್ತು ಮುಖಕ್ಕೆ ಕಚ್ಚಿದ ಭೂಪ..! ಆಸ್ಪತ್ರೆಗೆ ದಾಖಲಾದ ತಾಯಿ, ಮಗಳು

 

 

 

ಬೆಳ್ತಂಗಡಿ : ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ಮಗಳ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿ ಮುಖದ ಭಾಗಕ್ಕೆ ಕಚ್ಚಿ ಮಾಂಸ ಹೊರತೆಗೆದ ಘಟನೆ ಡಿ.18ರಂದು ಶಿಶಿಲ ಗ್ರಾಮದಲ್ಲಿ ನಡೆದಿದೆ.

ಮೂಲತಃ ಹಾವೇರಿ ಜಿಲ್ಲೆಯ ನಿವಾಸಿ ಸುರೇಶ್ ಗೌಡ(55) ಎಂಬಾತ ಕೋಟೆ ಬಾಗಿಲಿನಲ್ಲಿ ತನ್ನ ಪತ್ನಿಯ ತಂದೆ ನೀಡಿದ ಜಾಗದಲ್ಲಿ ಮನೆ ಮಾಡಿ ವಾಸವಾಗಿದ್ದು, ನಿನ್ನೆ ರಾತ್ರಿ ಮದ್ಯ ಸೇವಿಸಿ ಬಂದು ಪತ್ನಿಯ ಮೇಲೆ ಹಲ್ಲೆ ಮಾಡಿ ಮುಖದ ಭಾಗಕ್ಕೆ ಕಚ್ಚಿ ಮಾಂಸ ಹೊರತೆಗೆದು, ಕಣ್ಣಿಗೂ ಕಚ್ಚಿ ಬಳಿಕ ಕೋಲಿನಿಂದ ಹೊಡೆದು ಎಡ ಭಾಗದ ಕಣ್ಣನ್ನು ಸಂಪೂರ್ಣ ಹಾನಿಗೊಳಿಸಿದ್ದಾನೆ. ಮಗಳ ತಲೆಯಭಾಗಕ್ಕೆ ಮತ್ತು ಕಣ್ಣಿಗೆ ಹೊಡೆದಿದ್ದು ಇಬ್ಬರಿಗೂ ಮಾರಣಾಂತಿಕ ರೀತಿಯಲ್ಲಿ ಹಲ್ಲೆ ನಡೆಸಿದ್ದಾನೆ. ತಂದೆಯ ಹೊಡೆತದಿಂದ ತಪ್ಪಿಸಿಕೊಂಡ ಮಗಳು ನೆರೆ ಮನೆಗೆ ಓಡಿ ವಿಷಯ ತಿಳಿಸಿದ್ದಾಳೆ. ಈ ಸಂದರ್ಭ ಆರೋಪಿ ಸುರೇಶ್ ತೋಟದೊಳಗೆ ತಪ್ಪಿಸಿಕೊಂಡಿದ್ದಾನೆ.

ಸ್ಥಳಕ್ಕೆ ಬಂದ ನೆರೆಹೊರೆಯವರು, ವಿಪತ್ತು ನಿರ್ವಹಣಾ ತಂಡ ಹಾಗೂ ಪೊಲೀಸರು ಆರೋಪಿ ಸುರೇಶ್‌ನನ್ನು ಹುಡುಕಾಡಿದ್ದಾರೆ. ಸದ್ಯ ವಿಪರೀತ ಗಾಯಗೊಂಡ ತಾಯಿ ಮಗಳು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸರು ತಾಯಿ ಮಗಳ ಹೇಳಿಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

error: Content is protected !!