ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡ: ಜ 06 ರಂದು ಶಾಲಾ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ:

 

 

 

ಬೆಳ್ತಂಗಡಿ: ಪ್ರಕೃತಿ ರಮಣೀಯ ಮಡಿಲಿನ‌ ಗಡಾಯಿಕಲ್ಲು ಸಮೀಪದ ನೂರು ವರ್ಷಗಳ ಸಂಭ್ರಮದಲ್ಲಿರುವ ನಡ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜ 06 ರಂದು ನಡೆಯಲಿದೆ ಎಂದು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಹೇಳಿದರು. ಅವರು ನಡ ಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯ ಸಚಿವ ಎಸ್. ಮಧು ಬಂಗಾರಪ್ಪ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಸ್ಮಾರ್ಟ್ ಕ್ಲಾಸ್ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾಡಲಿದ್ದು ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಲೋಕ ಸಭಾ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭಾ ಸಂಸದ ಡಾ.‌ಡಿ. ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಹರೀಶ್ ಕುಮಾರ್, ಬಿ.ಎಂ. ಫಾರೂಕ್ , ಎಸ್.ಎಲ್ ಭೋಜೇಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಹಾಗೂ ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ಭಾಗವಹಿಸಲಿದ್ದಾರೆಎಂದರು.ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ ಮಾಜಿ ಸದಸ್ಯ ರಾಜಶೇಖರ ಅಜ್ರಿ, ನಡ ಗ್ರಾ.ಪಂ ಅಧ್ಯಕ್ಷೆ ಮಂಜುಳಾ, ಶಾಲಾ ಎಸ್. ಡಿ. ಎಂ.ಸಿ ಅಧ್ಯಕ್ಷ ವಸಂತ ಗೌಡ, ಮುಖ್ಯ ಶಿಕ್ಷಕಿ ಪುಷ್ಪಾ, ಗ್ರಾ. ಪಂ ಮಾಜಿ ಅಧ್ಯಕ್ಷ ವಿಜಯ ಗೌಡ, ನ್ಯಾಯವಾದಿ ಶಶಿಕಿರಣ್ ಜೈನ್, ಮುನಿರಾಜ ಅಜ್ರಿ, ಸಯ್ಯದ್ ಅಬೀಬ್ ಸಾಹೇಬ್, ಗ್ರಾ.ಪಂ ಸದಸ್ಯ ಪ್ರವೀಣ್ ವಿ.ಜಿ.ಉಪಸ್ಥಿತರಿದ್ದರು.

error: Content is protected !!