ಸುಬೇದಾರ್ ಮೇಜರ್ ಶಿವಕುಮಾರ್ ಸೇವಾ ನಿವೃತ್ತಿ: ಬೆಳ್ತಂಗಡಿಯಲ್ಲಿ ಜ 06 ರಂದು ಹುಟ್ಟೂರ ಭವ್ಯ ಸ್ವಾಗತ:

 

 

 

ಬೆಳ್ತಂಗಡಿ:ಭಾರತೀಯ ಸೇನೆಯಲ್ಲಿ ಸುದೀರ್ಘ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸುತ್ತಿರುವ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಲ್ಲಗುಡ್ಡೆ ನಿವಾಸಿ ಸುಬೇದಾರ್ ಮೇಜರ್ ಶಿವಕುಮರ್ ಅವರಿಗೆ ವಿವಿಧ ಸಂಘ ಸಂಸ್ಥೆಗಳ  ಸಹಕಾರಲ್ಲಿ   ಭವ್ಯ ಸ್ವಾಗತ ಕಾರ್ಯಕ್ರಮವು ಜ 06 ಶನಿವಾರ ನಡೆಯಲಿದೆ. ಸಂಜೆ 4 ಗಂಟೆಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಿಂದ ತೆರೆದ ವಾಹನದಲ್ಲಿ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಭವ್ಯ ಸ್ವಾಗತ ಮೆರವಣಿಗೆ ನಡೆಯಲಿದೆ.‌ಈ ವೇಳೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಿ ನಿವೃತ್ತ ಸೇನಾನಿಗೆ ವಿಶೇಷ ಗೌರವ ಹಾಗೂ ಅಭಿನಂದನೆ ಸಲ್ಲಿಸಲಿದ್ದಾರೆ.

error: Content is protected !!