ಉಜಿರೆ,ಮಗನ ಆತ್ಮಹತ್ಯೆ ಬೆನ್ನಲ್ಲೇ ತಂದೆಯೂ ಆತ್ಮಹತ್ಯೆ

 

 

 

ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ಜ.16 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ ಮಗ ಯಕ್ಷಿತ್ (14) ಜ.4 ರಂದು ಕ್ಷುಲಕ ವಿಚಾರದಲ್ಲಿ ಮನೆಯೊಳಗೆ ತಾಯಿಯ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜ.14 ರಂದು ಯಕ್ಷಿತ್ ಉತ್ತರಕ್ರಿಯೆ ನಡೆದಿದ್ದು‌‌‌. ಇದರ ಬೆನ್ನಲ್ಲೆ ಜ.16 ರಂದು(ಇಂದು) ಮನೆಯಲ್ಲಿ ತಂದೆ ಯೊಗೀಶ್ ಪೂಜಾರಿ(41) ಕೂಡ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲಗಳ ಪ್ರಕಾರ ತಂದೆ ಯೊಗೀಶ್ ಪೂಜಾರಿ ಮಗನ ಆತ್ಮಹತ್ಯೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

error: Content is protected !!