ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್, ಮದ್ಯದ ಅಂಗಡಿ ಬಂದ್ : ದ.ಕ ಜಿಲ್ಲಾಧಿಕಾರಿ ಆದೇಶ

ದ.ಕ: ಕೋಟ್ಯಾಂತರ ರಾಮಭಕ್ತರ ಅದೆಷ್ಟೋ ವರ್ಷಗಳ ರಾಮ ಮಂದಿರ ನಿರ್ಮಾಣದ ಕನಸು ಜ.22 ರಂದು ನನಸಾಗುತ್ತಿದೆ. ಈ ದಿನವನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸಲು ರಾಮಭಕ್ತರು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಸಂಭ್ರಮಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ ಮುನ್ನೆಚ್ಚರಿಕೆ ವಹಿಸಿದ್ದು ಜ.22ರಂದು ಬಾರ್, ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.


ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಒಳಪಡುವ ಎಲ್ಲಾ ಮದ್ಯದ ಅಂಗಡಿ ಬಾರ್ ಗಳನ್ನು ಜ.21ರ ಮಧ್ಯರಾತ್ರಿ 12.00 ಗಂಟೆಯಿAದ ಜ.23 ಪೂರ್ವಾಹ್ನ 6 ಗಂಟೆಯವರೆಗೆ ಮುಚ್ಚುವಂತೆ ಆದೇಶಿಸಿದ್ದು ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಿದೆ.

error: Content is protected !!