ಬೆಳ್ತಂಗಡಿ : ಆಟವಾಡುತ್ತಾ ಮನೆಯ ತೋಟದ ಕೆರೆಗೆ ಬಿದ್ದ 1 ವರ್ಷ ಮಗು: ಆಸ್ಪತ್ರೆ ಸೇರುವ ಮುನ್ನ ಉಸಿರು ಚೆಲ್ಲಿದ ಕಂದ..!

ಬೆಳ್ತಂಗಡಿ : ಆಟವಾಡುತ್ತಾ ತೋಟದ ಕೆರೆ ಬಳಿ ಹೋದ ಮಗು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡ ಗ್ರಾಮದಲ್ಲಿ ನಡೆದಿದೆ

ಕನ್ನಾಜೆಯ ನಿವಾಸಿ ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಒಬ್ಬನೇ ಮಗ ರೇಯನ್ ಡಿಸೋಜಾ (1ವರ್ಷ 11 ತಿಂಗಳು) ಇಂದು (ಜ.22) ತಮ್ಮ ಮನೆಯ ತೋಟದಲ್ಲಿರುವ ಕೆರೆಗೆ ಬಿದ್ದು ಸಾವನ್ನಪ್ಪಿದೆ.

ತಕ್ಷಣ ಮಗುವನ್ನು ಕೆರೆಯಿಂದ ಮೇಲಕ್ಕೆತ್ತಿ ಸ್ಥಳೀಯರ ಸಹಕಾರದಲ್ಲಿ ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಮಗು ಸಾವನ್ನಪ್ಪಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತಂದೆ ರೋಷನ್ ದೂರು ನೀಡಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

error: Content is protected !!