ವೇಣೂರು ಪಟಾಕಿ ಗೋಡೌನ್ ಸ್ಪೋಟ ಪ್ರಕರಣ -ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ, ಪರಿಶೀಲನೆ:

 

 

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಾಲಿಡ್ ಫೈರ್ ವರ್ಕ್ ಎಂಬ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿರುವ ಭಾರೀ ಸ್ಪೋಟ ನಡೆದ ಸ್ಥಳಕ್ಕೆ ದ.ಕ. ಜಿಲ್ಲಾ ಎಸ್ಪಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಮಾತನಾಡಿದ ಅವರು ಇಂದು ಸಂಜೆ ಸುಮಾರು 5.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಕೇರಳ ಮೂಲದ ವರ್ಗೀಸ್(62), ಸ್ವಾಮಿ(60) ಹಾಗೂ ಹಾಸನ ಅರಸೀಕೆರೆ ಮೂಲದ ಚೇತನ್ (24) ಮೃತಪಟ್ಟಿದ್ದಾರೆ. ಈ ಸ್ಪೋಟ ಯಾಕಾಯ್ತು?, ಏನಾಯ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

50 ಸೆನ್ಸ್ ಸ್ಥಳದಲ್ಲಿ ಸಯ್ಯದ್ ಬಶೀರ್ ಎಂಬುವವರು ಪಟಾಕಿ ಮಾಡಲು ಪರವಾನಿಗೆ ಪಡೆದಿದ್ದರು‌. 2011-2012ರಲ್ಲಿ ಪಡೆದಿರುವ ಪರವಾನಿಗೆ 2019ರಲ್ಲಿ ನವೀಕರಣ ಆಗಿದೆ. 2024ರ ಮಾರ್ಚ್ ವರೆಗೂ ಲೈಸೆನ್ಸ್ ಸಿಂಧುತ್ವವಿದೆ. ಬೇಡಿಕೆಗೆ ತಕ್ಕಂತೆ ಪಟಾಕಿ ಇಲ್ಲಿ ಮಾಡಲಾಗುತ್ತಿತ್ತು ಅನ್ನುವ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪಟಾಕಿ ತಯಾರಿಸುವಾಗ ಯಾವ ಕಾರಣಕ್ಕೆ ಸ್ಪೋಟಗೊಂಡಿದೆ ಎಂಬ ಕಾರಣ ಇನ್ನೂ ತಿಳಿದು ಬಂದಿಲ್ಲ. ಮೊಬೈಲ್ ಫರೆನ್ಸಿಕ್ ಟೀಮ್, ಡಿಪಾರ್ಟ್‌ಮೆಂಟ್ ಆಫ್ ಎಕ್ಸ್ಪೋಸಿವ್ಸ್ ತಂಡ ಬರುತ್ತಿದೆ ಎಂದು ಎಸ್ಪಿ ರಿಷ್ಯಂತ್ ಹೇಳಿದರು.

error: Content is protected !!