ಆತ್ಮಹತ್ಯೆಗೆ ಶರಣಾದ ಉಜಿರೆ ಕಾಲೇಜು ವಿದ್ಯಾರ್ಥಿ:ಧರ್ಮಸ್ಥಳದ ಮುಳಿಕ್ಕಾರ್ ಎಂಬಲ್ಲಿ ಘಟನೆ:

 

 

 

ಬೆಳ್ತಂಗಡಿ :ಉಜಿರೆಯ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ 09 ರಂದು ನಡೆದಿದೆ.

ಧರ್ಮಸ್ಥಳದ ಗ್ರಾಮದ ಮುಳಿಕ್ಕಾರ್ ಸಮೀಪದ ಕಜೋಡಿ ಎಂಬಲ್ಲಿಯ
ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಶ್ಲೇಶ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಮನೆಯ ಕೊಟ್ಟಿಗೆಯಲ್ಲಿ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ‌ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

error: Content is protected !!