ಬೆಳ್ತಂಗಡಿ,”ಪಶು ಸಂಜೀವಿನಿ”  ವಾಹನ ಚಾಲಕನ ಮೇಲೆ ಹಲ್ಲೆ‌ ಪ್ರಕರಣ ಬೆಂಗಳೂರಿನ ದಂಪತಿಗಳ ವಿರುದ್ಧ ಪ್ರಕರಣ ದಾಖಲು , ಬಂಧನ:

 

 

ಬೆಳ್ತಂಗಡಿ : ತುರ್ತು ಚಿಕಿತ್ಸೆಗಾಗಿ  ಹೋಗುತ್ತಿದ್ದ ಪಶು ಇಲಾಖೆಯ ಪಶು ಸಂಜೀವಿನಿ ವಾಹನದ ಚಾಲಕನ ಮೇಲೆ ಕ್ಷುಲ್ಲಕ ವಿಚಾರಕ್ಕೆ ದಂಪತಿಗಳು‌ ಹಲ್ಲೆ ಮಾಡಿದ ಘಟನೆ ಇಂದು ಬೆಳ್ತಂಗಡಿಯಲ್ಲಿ ನಡೆದಿದ್ದು. ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿತ್ತು. ಇದೀಗ ದಂಪತಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಇಬ್ಬರನ್ನು ಕೂಡ ಬಂಧಿಸಲಾಗಿದೆ.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನದ 1962 ಗೆ ಕಾಲ್ ಸೆಂಟರ್ ಗೆ ದನದ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕಿನ ನೆರಿಯದಿಂದ ಪೋನ್ ಬಂದಿದ್ದು ಈ ಬಗ್ಗೆ  ತುರ್ತು ಸೇವೆಯಲ್ಲಿ ತೆರಳುತಿದ್ದ  ಚಾಲಕನ ಮೇಲೆ ಲಾಯಿಲ ಜಂಕ್ಷನ್ ನಲ್ಲಿ ದಾರಿ ಬಿಡುವ ವಿಚಾರದಲ್ಲಿ ದಂಪತಿಗಳು‌ ಸೇರಿ ಹಲ್ಲೆಗೈದ ಘಟನೆ ಬೆಳ್ತಂಗಡಿಯ ಲಾಯಿಲ ಜಂಕ್ಷನ್ ನಲ್ಲಿ ಮಾ.12 ರಂದು ನಡೆದಿದೆ.

ಹಲ್ಲೆ ಮಾಡಿದ ಕಾರಿನ ಚಾಲಕ ಬೆಂಗಳೂರಿನ ಮಲ್ಲೇಶ್ವರಂನ ನಿವಾಸಿ HDFC ಬ್ಯಾಂಕ್ ನಲ್ಲಿ ಉದ್ಯೋಗದಲ್ಲಿರುವ ಶರತ್(40) ಮತ್ತು ಆತನ ಪತ್ನಿ ಶೃತಿ(34) ಎಂದು ಗುರುತಿಸಲಾಗಿದೆ. ಗಂಡ,ಹೆಂಡತಿ ,ಗಂಡು ಮಗು ಮತ್ತು ಶೃತಿ ತಾಯಿ ಸೇರಿ ಒಟ್ಟು ನಾಲ್ಕು ಜನ ವಿವಿಧ ದೇವಾಲಯಗಳಿಗೆ ಹೋಗುತ್ತಿದ್ದರು ಎನ್ನಲಾಗಿದೆ. ಇನ್ನೂ ಇನ್ಸೂರೆನ್ಸ್ ಇಲ್ಲದ ಕಾರು ಮತ್ತು ಹಲ್ಲೆ ಮಾಡಿದ ಶರತ್ ಮತ್ತು ಶೃತಿಯನ್ನು ಬೆಳ್ತಂಗಡಿ ಪೊಲೀಸ್ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರಕಾರಿ ಅಂಬುಲೆನ್ಸ್ ಹೊರ ಗುತ್ತಿಗೆದಾರನಾದ ಚಾಲಕ ಸುಬ್ರಮಣ್ಯ ನಿವಾಸಿ ರಕ್ಷಿತ್ ಕುಮಾರ್ (27) ಹಲ್ಲೆಗೊಳಗಾದ ಚಾಲಕನಾಗಿದ್ದಾನೆ.ಆತನನ್ನು ಬೆಳ್ತಂಗಡಿ ತಾಲೂಕಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ಪಶು ಇಲಾಖೆ ವಾಹನದ ಚಾಲಕ ರಜೆ ಇದ್ದ ಕಾರಣ 1962 ಗೆ ಕಾಲ್ ಸೆಂಟರ್ ಗೆ ಪಶು ಚಿಕಿತ್ಸೆಗಾಗಿ ನೆರಿಯದಿಂದ ಬಂದ ಕರೆಯ ಮೇರೆಗೆ ಕಡಬದಿಂದ ಬಂದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವಾಹನ ನೆರಿಯ ಕಡೆ ಚಾಲಕ ಹೊರಟು ಲಾಯಿಲ ಜಂಕ್ಷನ್ ಹೋಗುವಾಗ ಎದುರಿನಿಂದ ಬಂದು ಕಾರು ಚಾಲಕ ಮತ್ತು ಆತನ ಪತ್ನಿ ಅಡ್ಡ ಬಂದದ್ದನ್ನು ಪ್ರಶ್ನಿಸಿದಾಗ ಏಕಾಏಕಿ ತುರ್ತು ವಾಹನದ ಬಾಗಿಲು ತೆಗೆದು ಹಲ್ಲೆ ಮಾಡಲಾಗಿದೆ‌.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಗಾದ  ಚಾಲಕ ರಕ್ಷಿತ್ ಕುಮಾರ್ ನೀಡಿದ ದೂರಿನ ಮೇರೆಗೆ ಕಾರು ಚಾಲಕ ಶರತ್ ಮತ್ತು ಪತ್ನಿ ಶೃತಿ ವಿರುದ್ಧ 504,341,323,427 ಜೊತೆಗೆ 34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

error: Content is protected !!