ಹಳೆ ಕೋಟೆ ಅಪಘಾತದಲ್ಲಿ ಯುವಕ ಸಾವು: ಬೆಳ್ತಂಗಡಿ ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಭೇಟಿ:

 

 

 

ಬೆಳ್ತಂಗಡಿ: ಹಳೆಕೋಟೆ ಬಳಿ ಇಂದು ಮಧ್ಯಾಹ್ನ‌ ಸಂಭವಿಸಿದ ಪಿಕಪ್ ಹಾಗು ದ್ವಿಚಕ್ರ ವಾಹನ ಅಪಘಾತದಲ್ಲಿ ಲಾಯಿಲ ಯುವಕನೊಬ್ಬ ಸಾವನ್ನಪ್ಪಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಆಸ್ಪತ್ರೆಗೆ ಭೇಟಿ‌ ನೀಡಿ ಮೃತ ಯುವಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.‌

ಪೊಲೀಸರ ಜೊತೆ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ವೇಳೆ ಪಟ್ಟಣ ಪಂಚಾಯತ್ ಸದಸ್ಯ ಜಯಾನಂದ ಗೌಡ ಜೊತೆಗಿದ್ದರು.

ಭೀಕರ ಅಪಘಾತದಲ್ಲಿ ಇನ್ನೋರ್ವ ತೀವ್ರಗಾಯಗೊಂಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

error: Content is protected !!