ಬೆಳ್ತಂಗಡಿ , ಖಾಸಗಿ ಕಾಲೇಜು ಉಪನ್ಯಾಸಕ ನಂದಕುಮಾರ್ ನಿಧನ:

ಬೆಳ್ತಂಗಡಿ, ಖಾಸಗಿ ಕಾಲೇಜು ಉಪನ್ಯಾಸಕ ನಂದಕುಮಾರ್ ನಿಧನ:

 

 

 

 

ಬೆಳ್ತಂಗಡಿ:ಕಳೆದ ಕೆಲ ಸಮಯಗಳಿಂದ ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ವಾಣಿ ಕಾಲೇಜಿನ ಉಪನ್ಯಾಸಕ ನಂದಕುಮಾರ್(40) ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪುದುವೆಟ್ಟು ಗ್ರಾಮದ ಎಟ್ಯೋಡು ಶೇಖರ ಗೌಡ ಪುತ್ರ ನಂದಕುಮಾ‌ರ್ ಕಳೆದ ಎರಡು ತಿಂಗಳ ಹಿಂದೆ ಅನಾರೋಗ್ಯಕ್ಕೀಡಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.ಅವರು ಪತ್ನಿ ದಿವ್ಯಾ ನಂದಕುಮಾ‌ರ್ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

error: Content is protected !!