ಬೆಳ್ತಂಗಡಿ: ಬಸ್ ಹಾಗೂ ಟ್ಯಾಂಕರ್ ಡಿಕ್ಕಿ: ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಘಟನೆ ಮೇ.08ರ ಮಧ್ಯಾಹ್ದನ ಸಂಭವಿಸಿದೆ.

ಸಂತೆಕಟ್ಟೆಯ ಅಯ್ಯಪ್ಪ ದೇವಸ್ಥಾನದ ಬಳಿ ಖಾಸಗಿ ಬಸ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು ಈ ವೇಳೆ ಬಸ್ಸಿನಲ್ಲಿದ್ದ ಹಲವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಕೂಡಲೇ ಪಟ್ಟಣ ಪಂಚಾಯತ್ ಸದಸ್ಯ ಜಯಾನಂದ ಗೌಡ ಹಾಗೂ ಸ್ಥಳೀಯರು ಪ್ರಯಾಣಿಕರನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

error: Content is protected !!