ಉಜಿರೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಕಾರ್ಯಪ್ರವೃತ್ತರಾದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಬೆಂಗಳೂರಿನ ಪ್ರವಾಸಿಗರಿಗೆ ಹಾಗೂ ಸ್ಥಳೀಯ ಯುವಕರಿಗೆ ಮಾತಿನ ಚಕಮಕಿ ನಡೆದು ಹಲ್ಲೆ ಮಾಡಿಕೊಂಡ ಘಟನೆ ಉಜಿರೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತಿದ್ದ ಕಾರಿನ ಪ್ರಯಾಣಿಕರು

ಉಜಿರೆಯ ಬಾರ್ ವೊಂದರಲ್ಲಿ ಗುರುವಾರ ರಾತ್ರಿ ಕುಡಿದು ಹಿಂತಿರುಗಿ ಬರುತ್ತಿದ್ದ ವೇಳೆ ಅದರಲ್ಲಿ ಒಬ್ಬ ವ್ಯಕ್ತಿ ಪೋನಿನಲ್ಲಿ ಜೋರು ಧ್ವನಿಯಲ್ಲಿ ಮಾತನಾಡುತಿದ್ದಾಗ ಪಕ್ಕದಲ್ಲೆ ಇದ್ದ ಸ್ಥಳೀಯ ಯುವಕ ಮೆಲ್ಲ ಮಾತನಾಡಿ ಎಂದಿದ್ದಾರೆ. ಈ ವೇಳೆ ಸ್ಥಳೀಯರಿಗೆ ಹಾಗೂ ಕಾರಿನಲ್ಲಿ ಬಂದವರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ಯತ್ನ ಹಾಗೂ ಕಾರಿಗೆ ಕಲ್ಲು ತೂರಾಟವೂ ನಡೆದಿದೆ. ಈ ಬಗ್ಗೆ ಮಾಹಿತಿ ತಿಳಿದ  ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರಲ್ಲದೇ ಎರಡೂ ತಂಡದವರಿಗೆ  ಎಚ್ಚರಿಕೆ ನೀಡಿ  ಕಳುಹಿಸಿಕೊಟ್ಟಿದ್ದಾರೆ. ಮೇಲ್ನೋಟಕ್ಕೆ ಕುಡಿದ ಮತ್ತಿನಲ್ಲಿ ಈ ಘಟನೆ ನಡೆದಿದ್ದು ಯಾವುದೇ ದೂರು ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ.

error: Content is protected !!