ಕೊಡಗು : ಬಾಲಕಿಯ ರುಂಡ ಕಡಿದ ಆರೋಪಿ ಅರೆಸ್ಟ್: ಮರ ಕಡಿಯುವ ಮಚ್ಚಿನಿಂದ ಮೀನಾಳ ರುಂಡ ಕತ್ತರಿಸಿ ಹತ್ಯೆ: ಬಾಲಕಿಯ ತಾಯಿಯ ಕೈ ಕಡಿದಿದ್ದ ಸೈಕೋ

ಕೊಡಗು : ನಿಶ್ಚಿತಾರ್ಥ ತಡೆದ ವಿಚಾರಕ್ಕೆ ಯುವಕನೋರ್ವ ಬಾಲಕಿಯ ತಲೆಕಡಿದು ಬಳಕ ನಾಪತ್ತೆಯಾಗಿದ್ದಾತ ಸೋಮವಾರಪೇಟೆ ಪೊಲೀಸರು ಕಾರ್ಯಾಚರಣೆಯಿಂದ ಬಂಧಿಯಾಗಿದ್ದಾನೆ.

ಬಾಲಕಿಯ ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದಾತನ ಹುಡುಕಾಟಕ್ಕೆ ಪೊಲೀಸರು ಹಲವು ತಂಡಗಳನ್ನು ರಚಿಸಿ, ಬಳಿಕ ಶೋಧ ಕಾರ್ಯ ನಡೆಸುತ್ತಿದ್ದರು. ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಆತ ಅಡಗಿದ್ದು ಅಲ್ಲಿಂದ ಆತನನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ.

ಘಟನೆಯ ವಿವರ: ಸೂರ್ಲಬ್ಬಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಏಕೈಕ ವಿದ್ಯಾರ್ಥಿನಿ ಮೀನಾ. ಆಕೆ ಮನೆಯಿಂದ ನಾಲ್ಕು ಕಿ.ಮೀ ದೂರದಲ್ಲಿರುವ ಶಾಲೆಗೆ ತನ್ನ ಮನೆಯಿಂದ ಗುಡ್ಡ ಗಾಡು ರಸ್ತೆಯಲ್ಲಿ ನಿತ್ಯ ನಡೆದೇ ಸಾಗುತ್ತಿದ್ದಳು. ಪಾಠದಲ್ಲಿ ಮಾತ್ರವಲ್ಲ ಆಟದಲ್ಲೂ ಬಹಳ ಚೂಟಿ ಇದ್ದಳು. ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಿದ್ದಳು. ಒಬ್ಬಳೇ ಆದ್ರೂ ಶಾಲೆಗೆ ಹೋಗ್ತಾಳಲ್ಲಾ ಅಂತ ಊರವರೆಲ್ಲಾ ಈಕೆಯ ಬಗ್ಗೆ ಹೆಮ್ಮೆ ಪಡ್ತಾ ಇದ್ರು. ಆದರೆ ಹದಿಹರೆಯದ ವಯಸ್ಸಿನಲ್ಲಿ ಈಕೆಗೆ ಲವ್ ಆಗಿದೆ. 35 ವರ್ಷದ ಓಂಕಾರಪ್ಪ ಅಲಿಯಾಸ್ ಪ್ರಕಾಶ್ ಎಂಬುವವನ ಜೊತೆ ಮೀನಾಗೆ ಪ್ರೀತಿ ಬೆಳೆದಿತ್ತು. ಮೀನಾಳ ಗ್ರಾಮದಿಂದ ಮೂರು ಕಿ.ಮೀಟರ್ ದೂರದ ಹಮ್ಮಿಯಾಲ ಗ್ರಾಮದ ಪ್ರಕಾಶ್ ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಅಷ್ಟೋ ಇಷ್ಟೋ ಸಂಪಾದನೆ ಮಾಡುತ್ತಿದ್ದ. ಅದು ಬಿಟ್ಟರೆ ಕಳೆದೊಂದು ವರ್ಷದಿಂದ ಮೀನಾಳ ಹಿಂದೆಯೇ ಸುತ್ತುತ್ತಿದ್ದ. ಇವರಿಬ್ಬರು ಪ್ರೀತಿಸ್ತಾ ಇದ್ದುದ್ದು ಇಡೀ ಊರಿಗೆ ಗೊತ್ತಿತ್ತು. ಈತನೇ ತನ್ನ ಬೈಕಿನಲ್ಲಿ ಮೀನಾಳನ್ನ ಮನೆಯಿಂದ ಶಾಲೆಗೆ ಡ್ರಾಪ್ ಮಾಡುತ್ತಿದ್ದ. ಮೇ.09ರ ಎಸ್‌ಎಸ್‌ಎಲ್‌ಸಿ ಫಲಿತಾಂಶದ ದಿನವೇ ಮೀನಾ ಹಾಗೂ ಪ್ರಕಾಶ್‌ಗೆ ನಿಶ್ಚಿತಾರ್ಥ ನೆರವೇರಿತ್ತು. ಬಂಧು ಮಿತ್ರರ ಎದುರು ಇಬ್ಬರು ಖುಷಿ ಖುಷಿಯಾಗಿಯೇ ಕೇಕ್ ಕಟ್ ಮಾಡಿ ರಿಂಗ್ ಪಾಸ್ ಮಾಡಿ ಎಂಗೇಜ್‌ಮೆAಟ್ ಮಾಡಿಕೊಂಡಿದ್ದರು. ಆದರೆ ಅಪ್ರಾಪ್ತೆಗೆ ನಿಶ್ಚಿತಾರ್ಥ ನಡೆಯುತ್ತಿದೆ ಎಂಬ ಮಾಹಿತಿಯನ್ನ ಯಾರೋ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ಇಲಾಖೆ ಅಧಿಕಾರಿಗಳು ಮೀನಾಳ ಪೋಷಕರಿಗೆ ಈಗಲೇ ಮದುವೆ ಮಾಡದಂತೆ ತಿಳಿ ಹೇಳಿದ್ದಾರೆ. ಅಲ್ಲದೆ ಪೋಷಕರ ಬಳಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

ಇಷ್ಟೆಲ್ಲ ಆದ ಬಳಿಕ ಸಂಜೆ ಪ್ರಕಾಶ್ ಮರ ಕಡಿಯುವ ಮಚ್ಚಿನೊಂದಿಗೆ ಮೀನಾಳ ಮನೆಗೆ ಬಂದಿದ್ದು ಮೀನಾ ಹಾಗೂ ಅವಳ ಪೋಷಕರ ಜೊತೆ ಜಗಳವಾಡಿದ್ದಾನೆ. 18 ವರ್ಷ ಆಗುವವರೆಗೆ ಮದುವೆ ಬೇಡ ಎಂದು ಪೋಷಕರು ಹೇಳಿದ್ದಕ್ಕೆ ಕೋಪಗೊಂಡು ಜಗಳ ಜೋರಾಗಿದೆ. ಇದರಿಂದ ಕುಪಿತಗೊಂಡ ಪ್ರಕಾಶ್ ಮಚ್ಚಿನಿಂದ ಮೊದಲು ತಾಯಿ ಜಾನಕಿಯ ಕೈ ಕಡಿದಿದ್ದಾನೆ, ಜಾನಕಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ತಡೆಯಲು ಬಂದ ತಂದೆ ಸುಬ್ರಮಣಿಗೆ ಜಾಡಿಸಿ ಒದ್ದ ರಭಸಕ್ಕೆ ಅವರೂ ಕುಸಿದು ಬಿದ್ದಿದ್ದಾರೆ. ಬಳಿಕ ಪ್ರಕಾಶ್, ಮೀನಾಳನ್ನ ಎಳೆದೊಯ್ದಿದ್ದಾನೆ. ಮನೆಯಿಂದ ಅಂದಾಜು 300 ಮೀಟರ್ ದೂರದವರೆಗೆ ಎಳೆದೊಯ್ದು ಮೀನಾಳ ಕುತ್ತಿಗೆಯನ್ನೇ ಕಡಿದು ರುಂಡ ಮುಂಡ ಬೇರ್ಪಡಿಸಿ ರುಂಡದೊAದಿಗೆ ಪರಾರಿಯಾಗಿದ್ದ.

error: Content is protected !!