ಕಳೆಂಜ : ನಂದಗೋಕುಲ ದೀಪೋತ್ಸವ ಮುಂದೂಡಿಕೆ!

ಬೆಳ್ತಂಗಡಿ: ಕಳೆದ 4 ವರ್ಷಗಳ ಹಿಂದೆ ಸ್ಥಾಪನೆಗೊಂಡ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಆಶ್ರಯದಲ್ಲಿ ಕಳೆಂಜ ಗ್ರಾಮದಲ್ಲಿ ನಡೆಯುತ್ತಿರುವ ನಂದಗೋಕುಲ ಗೋ ಶಾಲೆಯಲ್ಲಿ ಮೇ.26ರಂದು ಸಂಜೆ ‘ನಂದ ಗೋಕುಲ ದೀಪೋತ್ಸವ’ ಪುಣ್ಯಕೋಟಿಗೆ ಒಂದು ಕೋಟಿ.. ಗೋಮಾತೆ ಗೆ ಕೋಟಿಯ ನಮನ ವಿಶಿಷ್ಟ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಆದರೆ ಅನಿವಾರ್ಯ ಕಾರಣದಿಂದ ದೀಪೋತ್ಸವವನ್ನು ಮುಂದೂಡಲಾಗಿದೆ.

ದೀಪೋತ್ಸವವನ್ನು ಮುಂದೂಡಿರಲು ಕಾರಣ ತಿಳಿದು ಬಂದಿಲ್ಲ. ಆದರೆ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ನಂದಗೋಕುಲ ದೀಪೋತ್ಸವ ಸಮಿತಿ ಹಾಗೂ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!