ಕೊಯ್ಯೂರು ಕಾಂತಜೆ ಬಳಿ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ,:ಅದೃಷ್ಟವಶಾತ್ ಅಪಾಯದಿಂದ ಪಾರಾದ ಪ್ರಯಾಣಿಕರು:

 

 

 

ಬೆಳ್ತಂಗಡಿ : ಕೊಯ್ಯೂರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಮೇ.26 ಬೆಳಿಗ್ಗೆ ನಡೆದಿದೆ.
ಬಂದಾರಿನಿಂದ ಹೊರಟು ಕೊಯ್ಯೂರು ಮಾರ್ಗವಾಗಿ ಬೆಳ್ತಂಗಡಿಗೆ ಬರುವ ಸರಕಾರಿ ಬಸ್ಸಿನಲ್ಲಿ ಸುಮಾರು 25 ಕ್ಕೂ ಹೆಚ್ಚು ಜನರು ಪ್ರಯಾಣಿಕರಿದ್ದರು. ಚಾಲಕ ಅತೀ ವೇಗವಾಗಿ ಬಸ್ ಚಲಾಯಿಸುವ ವೇಳೆಗೆ ಕೊಯ್ಯೂರು ಸಮೀಪದ ಕಾಂತಾಜೆ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ದೊಡ್ಡ ತೋಡಿನ ಸೇತುವೆಯ ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಅದೃಷ್ಟವಶಾತ್ ಅಂದಾಜು ಸುಮಾರು 20 ಅಡಿ ಕೆಳಗೆ ಪ್ರಪಾತಕ್ಕೆ ಬಸ್ ಬೀಳುವುದು ಸ್ವಲ್ಪದರಲ್ಲೇ ತಪ್ಪಿದಂತಾಗಿದೆ. ಜೀವ ಹಾರಿ ಹೋದಂತೆ ಆಗಿದೆ ಎಂದು ಪ್ರಯಾಣಿಕರು ನಿಟ್ಟುಸಿರು ಬಿಟ್ಟು ಚಾಲಕನ ದುರ್ವರ್ತನೆಗೆ ಹಿಡಿಶಾಪ ಹಾಕಿದರು. ಬಸ್ಸಿನ ಎದುರಿನ ಒಂದು ಭಾಗದಲ್ಲಿ ನುಜ್ಜು,ಗುಜ್ಜಾಗಿದೆ.ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾರೆ.

error: Content is protected !!